ಘಾಟಿ ದನಗಳ ಜಾತ್ರೆಗೆ ಬಂದ ರೈತರಿಗೆ ಊಟ ವ್ಯವಸ್ಥೆ ಕಲ್ಪಿಸಿದ ಬೆಂ.ಗ್ರಾ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರತಾಪ್

 

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಶ್ರೀ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯು ದಕ್ಷಿಣ ಭಾರತದಲ್ಲೇ ಹೆಚ್ಚು ಪ್ರಸಿದ್ಧಿ ಪಡೆದಿದೆ. ಈ ದನಗಳ ಜಾತ್ರೆ ಡಿ.20ರಿಂದ ಪ್ರಾರಂಭವಾಗಿದೆ. ತುಂಬು ಜಾತ್ರೆಗೆ ದೂರದ ಊರುಗಳಿಂದ ಹೊರಿಗಳೊಂದಿಗೆ ಸಾಲು ಸಾಲಾಗಿ ರೈತರು ಬರುತ್ತಿದ್ದಾರೆ. ದೂರದ ಊರುಗಳಿಂದ ಬಂದಿರುವ ರೈತರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ವಕೀಲ ಪ್ರತಾಪ್ ಹೇಳಿದರು.

ಘಾಟಿ ದನಗಳ ಜಾತ್ರೆಯಲ್ಲಿ ರೈತರಿಗೆ ಊಟ ವಿನಿಯೋಗದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಾನದಲ್ಲೇ ಶ್ರೇಷ್ಠದಾನ ಅನ್ನದಾನ. ದೂರದ ಊರುಗಳಿಂದ ರೈತರು ಜಾತ್ರೆಗೆ ಬಂದಿರುತ್ತಾರೆ. ಅವರ ಹಸಿವನ್ನ ನೀಗಿಸುವುದು ನಮ್ಮ ಕರ್ತವ್ಯ. ಆದ್ದರಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಅನ್ನದಾನವನ್ನು ಮೂರು ದಿನಗಳ ಕಾಲ ವಿತರಣೆ ಮಾಡಲಾಗುತ್ತದೆ. ರೈತರು ಇದನ್ನ ಸದುಪಯೋಗ ಪಡೆದುಕೊಳ್ಳಬೇಕು. ಇದರ ಜೊತೆಗೆ ಸುಮಾರು ನೂರು ಕೆ.ಜಿಯಷ್ಟು ಹಣ್ಣು ಹಂಪಲುಗಳನ್ನು ರೈತರಿಗೆ ವಿತರಣೆ ಮಾಡಿದ್ದೇವೆ ಎಂದರು.

ಈ ವೇಳೆ ಘಾಟಿ ಗ್ರಾಮ ಪಂಚಾಯಿತಿ ಸದಸ್ಯ ವಾಸು, ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ್ಯ ಆನಂದ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

6 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

8 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

20 hours ago

ಬೆಂ. ಗ್ರಾ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ- ಡಿಸಿ ಡಾ.ಕೆ ಎನ್ ಅನುರಾಧ

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…

23 hours ago

ವಸತಿ ಶಾಲೆಯಲ್ಲಿ ಅನುಮಾನಾಸ್ಪದ ವಿದ್ಯಾರ್ಥಿ ಸಾವು: ಶಿಕ್ಷಕರ ವಿರುದ್ಧ ಪೋಷಕರ ಆರೋಪ

ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…

24 hours ago

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

1 day ago