ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಶ್ರೀ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯು ದಕ್ಷಿಣ ಭಾರತದಲ್ಲೇ ಹೆಚ್ಚು ಪ್ರಸಿದ್ಧಿ ಪಡೆದಿದೆ. ಈ ದನಗಳ ಜಾತ್ರೆ ಡಿ.20ರಿಂದ ಪ್ರಾರಂಭವಾಗಿದೆ. ತುಂಬು ಜಾತ್ರೆಗೆ ದೂರದ ಊರುಗಳಿಂದ ಹೊರಿಗಳೊಂದಿಗೆ ಸಾಲು ಸಾಲಾಗಿ ರೈತರು ಬರುತ್ತಿದ್ದಾರೆ. ದೂರದ ಊರುಗಳಿಂದ ಬಂದಿರುವ ರೈತರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ವಕೀಲ ಪ್ರತಾಪ್ ಹೇಳಿದರು.
ಘಾಟಿ ದನಗಳ ಜಾತ್ರೆಯಲ್ಲಿ ರೈತರಿಗೆ ಊಟ ವಿನಿಯೋಗದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಾನದಲ್ಲೇ ಶ್ರೇಷ್ಠದಾನ ಅನ್ನದಾನ. ದೂರದ ಊರುಗಳಿಂದ ರೈತರು ಜಾತ್ರೆಗೆ ಬಂದಿರುತ್ತಾರೆ. ಅವರ ಹಸಿವನ್ನ ನೀಗಿಸುವುದು ನಮ್ಮ ಕರ್ತವ್ಯ. ಆದ್ದರಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಅನ್ನದಾನವನ್ನು ಮೂರು ದಿನಗಳ ಕಾಲ ವಿತರಣೆ ಮಾಡಲಾಗುತ್ತದೆ. ರೈತರು ಇದನ್ನ ಸದುಪಯೋಗ ಪಡೆದುಕೊಳ್ಳಬೇಕು. ಇದರ ಜೊತೆಗೆ ಸುಮಾರು ನೂರು ಕೆ.ಜಿಯಷ್ಟು ಹಣ್ಣು ಹಂಪಲುಗಳನ್ನು ರೈತರಿಗೆ ವಿತರಣೆ ಮಾಡಿದ್ದೇವೆ ಎಂದರು.
ಈ ವೇಳೆ ಘಾಟಿ ಗ್ರಾಮ ಪಂಚಾಯಿತಿ ಸದಸ್ಯ ವಾಸು, ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ್ಯ ಆನಂದ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…