ಸುಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಡಿ.20ರಿಂದ ಆರಂಭವಾಗಿದ್ದು, ದೂರದ ಊರುಗಳಿಂದ ಬರುವ ರೈತರ ರಾಸುಗಳಿಗೆ ಉಚಿತ ಮೇವು, ನೀರು ವಿತರಣೆ ಕಾರ್ಯಕ್ರಮವನ್ನು ನವ ಕರ್ನಾಟಕ ಯುವ ಶಕ್ತಿ ವೇದಿಕೆ ಆಯೋಜನೆ ಮಾಡಲಾಗಿದೆ ಎಂದು ವೇದಿಕೆ ಅಧ್ಯಕ್ಷ ಅಂಬರೀಶ್ ಹೇಳಿದರು.
ಘಾಟಿ ದನಗಳ ಜಾತ್ರೆಯಲ್ಲಿ ರಾಸುಗಳಿಗೆ ಉಚಿತವಾಗಿ ಮೇವು ಮತ್ತು ನೀರು ವಿತರಣೆ ಮಾಡಿ ಮಾತನಾಡಿದ ಅವರು, ಈ ಕಾರ್ಯಕ್ರಮ ಇನ್ನೂ ಮೂರು – ನಾಲ್ಕು ದಿನ ಮುಂದುವರಿಯುತ್ತದೆ. ಹೊರ ರಾಜ್ಯ ಹಾಗೂ ಜಿಲ್ಲೆಗಳ ರೈತರಿಗೆ ಮೊದಲ ಆದ್ಯತೆ ನೀಡಲು ತೀರ್ಮಾನಿಸಿ ಅದರಂತೆ ಮೇವು ನೀರು ನೀಡಲಾಗುತ್ತಿದೆ ಎಂದು ಹೇಳಿದರು.
ಇದರಿಂದ ರೈತರಿಗೆ ಬಹಳಷ್ಟು ಅನುಕೂಲವಾಗಿದೆ. ಇನ್ನೂ ರೈತರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ತಿಳಿಸಿದರು.
ಕೆಲವೆಡೆ ಅತಿವೃಷ್ಟಿ ಮತ್ತು ಕೆಲವೆಡೆ ಅನಾವೃಷ್ಟಿಯಿಂದ ಈ ವರ್ಷ ರೈತರು ತೀವ್ರ ನಷ್ಟದಲ್ಲಿದ್ದಾರೆ ಹಾಗೂ ಮೇವಿನ ಕೊರತೆ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ನವ ಕರ್ನಾಟಕ ಯುವಶಕ್ತಿ ವೇದಿಕೆ ಈ ಕಾರ್ಯಕ್ರಮ ಕೇವಲ ದಾನ ಕಾರ್ಯವಲ್ಲದೆ ರೈತ ಸಮುದಾಯವನ್ನು ಬೆಂಬಲಿಸುವ ಗುರಿ ಹೊಂದಲಾಗಿದೆ ಎಂದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…