ಸುಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಡಿ.20ರಿಂದ ಆರಂಭವಾಗಿದ್ದು, ದೂರದ ಊರುಗಳಿಂದ ಬರುವ ರೈತರ ರಾಸುಗಳಿಗೆ ಉಚಿತ ಮೇವು, ನೀರು ವಿತರಣೆ ಕಾರ್ಯಕ್ರಮವನ್ನು ನವ ಕರ್ನಾಟಕ ಯುವ ಶಕ್ತಿ ವೇದಿಕೆ ಆಯೋಜನೆ ಮಾಡಲಾಗಿದೆ ಎಂದು ವೇದಿಕೆ ಅಧ್ಯಕ್ಷ ಅಂಬರೀಶ್ ಹೇಳಿದರು.
ಘಾಟಿ ದನಗಳ ಜಾತ್ರೆಯಲ್ಲಿ ರಾಸುಗಳಿಗೆ ಉಚಿತವಾಗಿ ಮೇವು ಮತ್ತು ನೀರು ವಿತರಣೆ ಮಾಡಿ ಮಾತನಾಡಿದ ಅವರು, ಈ ಕಾರ್ಯಕ್ರಮ ಇನ್ನೂ ಮೂರು – ನಾಲ್ಕು ದಿನ ಮುಂದುವರಿಯುತ್ತದೆ. ಹೊರ ರಾಜ್ಯ ಹಾಗೂ ಜಿಲ್ಲೆಗಳ ರೈತರಿಗೆ ಮೊದಲ ಆದ್ಯತೆ ನೀಡಲು ತೀರ್ಮಾನಿಸಿ ಅದರಂತೆ ಮೇವು ನೀರು ನೀಡಲಾಗುತ್ತಿದೆ ಎಂದು ಹೇಳಿದರು.
ಇದರಿಂದ ರೈತರಿಗೆ ಬಹಳಷ್ಟು ಅನುಕೂಲವಾಗಿದೆ. ಇನ್ನೂ ರೈತರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ತಿಳಿಸಿದರು.
ಕೆಲವೆಡೆ ಅತಿವೃಷ್ಟಿ ಮತ್ತು ಕೆಲವೆಡೆ ಅನಾವೃಷ್ಟಿಯಿಂದ ಈ ವರ್ಷ ರೈತರು ತೀವ್ರ ನಷ್ಟದಲ್ಲಿದ್ದಾರೆ ಹಾಗೂ ಮೇವಿನ ಕೊರತೆ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ನವ ಕರ್ನಾಟಕ ಯುವಶಕ್ತಿ ವೇದಿಕೆ ಈ ಕಾರ್ಯಕ್ರಮ ಕೇವಲ ದಾನ ಕಾರ್ಯವಲ್ಲದೆ ರೈತ ಸಮುದಾಯವನ್ನು ಬೆಂಬಲಿಸುವ ಗುರಿ ಹೊಂದಲಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…