ಸುಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಡಿ.20ರಿಂದ ಆರಂಭವಾಗಿದ್ದು, ದೂರದ ಊರುಗಳಿಂದ ಬರುವ ರೈತರ ರಾಸುಗಳಿಗೆ ಉಚಿತ ಮೇವು, ನೀರು ವಿತರಣೆ ಕಾರ್ಯಕ್ರಮವನ್ನು ನವ ಕರ್ನಾಟಕ ಯುವ ಶಕ್ತಿ ವೇದಿಕೆ ಆಯೋಜನೆ ಮಾಡಲಾಗಿದೆ ಎಂದು ವೇದಿಕೆ ಅಧ್ಯಕ್ಷ ಅಂಬರೀಶ್ ಹೇಳಿದರು.
ಘಾಟಿ ದನಗಳ ಜಾತ್ರೆಯಲ್ಲಿ ರಾಸುಗಳಿಗೆ ಉಚಿತವಾಗಿ ಮೇವು ಮತ್ತು ನೀರು ವಿತರಣೆ ಮಾಡಿ ಮಾತನಾಡಿದ ಅವರು, ಈ ಕಾರ್ಯಕ್ರಮ ಇನ್ನೂ ಮೂರು – ನಾಲ್ಕು ದಿನ ಮುಂದುವರಿಯುತ್ತದೆ. ಹೊರ ರಾಜ್ಯ ಹಾಗೂ ಜಿಲ್ಲೆಗಳ ರೈತರಿಗೆ ಮೊದಲ ಆದ್ಯತೆ ನೀಡಲು ತೀರ್ಮಾನಿಸಿ ಅದರಂತೆ ಮೇವು ನೀರು ನೀಡಲಾಗುತ್ತಿದೆ ಎಂದು ಹೇಳಿದರು.
ಇದರಿಂದ ರೈತರಿಗೆ ಬಹಳಷ್ಟು ಅನುಕೂಲವಾಗಿದೆ. ಇನ್ನೂ ರೈತರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ತಿಳಿಸಿದರು.
ಕೆಲವೆಡೆ ಅತಿವೃಷ್ಟಿ ಮತ್ತು ಕೆಲವೆಡೆ ಅನಾವೃಷ್ಟಿಯಿಂದ ಈ ವರ್ಷ ರೈತರು ತೀವ್ರ ನಷ್ಟದಲ್ಲಿದ್ದಾರೆ ಹಾಗೂ ಮೇವಿನ ಕೊರತೆ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ನವ ಕರ್ನಾಟಕ ಯುವಶಕ್ತಿ ವೇದಿಕೆ ಈ ಕಾರ್ಯಕ್ರಮ ಕೇವಲ ದಾನ ಕಾರ್ಯವಲ್ಲದೆ ರೈತ ಸಮುದಾಯವನ್ನು ಬೆಂಬಲಿಸುವ ಗುರಿ ಹೊಂದಲಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…