ಸುಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಡಿ.20ರಿಂದ ಆರಂಭವಾಗಿದ್ದು, ದೂರದ ಊರುಗಳಿಂದ ಬರುವ ರೈತರ ರಾಸುಗಳಿಗೆ ಉಚಿತ ಮೇವು, ನೀರು ವಿತರಣೆ ಕಾರ್ಯಕ್ರಮವನ್ನು ನವ ಕರ್ನಾಟಕ ಯುವ ಶಕ್ತಿ ವೇದಿಕೆ ಆಯೋಜನೆ ಮಾಡಲಾಗಿದೆ ಎಂದು ವೇದಿಕೆ ಅಧ್ಯಕ್ಷ ಅಂಬರೀಶ್ ಹೇಳಿದರು.
ಘಾಟಿ ದನಗಳ ಜಾತ್ರೆಯಲ್ಲಿ ರಾಸುಗಳಿಗೆ ಉಚಿತವಾಗಿ ಮೇವು ಮತ್ತು ನೀರು ವಿತರಣೆ ಮಾಡಿ ಮಾತನಾಡಿದ ಅವರು, ಈ ಕಾರ್ಯಕ್ರಮ ಇನ್ನೂ ಮೂರು – ನಾಲ್ಕು ದಿನ ಮುಂದುವರಿಯುತ್ತದೆ. ಹೊರ ರಾಜ್ಯ ಹಾಗೂ ಜಿಲ್ಲೆಗಳ ರೈತರಿಗೆ ಮೊದಲ ಆದ್ಯತೆ ನೀಡಲು ತೀರ್ಮಾನಿಸಿ ಅದರಂತೆ ಮೇವು ನೀರು ನೀಡಲಾಗುತ್ತಿದೆ ಎಂದು ಹೇಳಿದರು.
ಇದರಿಂದ ರೈತರಿಗೆ ಬಹಳಷ್ಟು ಅನುಕೂಲವಾಗಿದೆ. ಇನ್ನೂ ರೈತರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ತಿಳಿಸಿದರು.
ಕೆಲವೆಡೆ ಅತಿವೃಷ್ಟಿ ಮತ್ತು ಕೆಲವೆಡೆ ಅನಾವೃಷ್ಟಿಯಿಂದ ಈ ವರ್ಷ ರೈತರು ತೀವ್ರ ನಷ್ಟದಲ್ಲಿದ್ದಾರೆ ಹಾಗೂ ಮೇವಿನ ಕೊರತೆ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ನವ ಕರ್ನಾಟಕ ಯುವಶಕ್ತಿ ವೇದಿಕೆ ಈ ಕಾರ್ಯಕ್ರಮ ಕೇವಲ ದಾನ ಕಾರ್ಯವಲ್ಲದೆ ರೈತ ಸಮುದಾಯವನ್ನು ಬೆಂಬಲಿಸುವ ಗುರಿ ಹೊಂದಲಾಗಿದೆ ಎಂದರು.
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…
ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…
ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…