ಘಾಟಿ‌ ದನಗಳ ಜಾತ್ರೆ: ಉಚಿತ ಜಾನುವಾರು ಮೇವು ವಿತರಣೆ ಆರಂಭ

ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯ ಅಂಗವಾಗಿ ನವ ಕರ್ನಾಟಕ ಯುವ ಶಕ್ತಿ ವೇದಿಕೆ ಆಯೋಜಿಸಿದ ಉಚಿತ ಜಾನುವಾರು ಮೇವು ವಿತರಣಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಉದ್ಘಾಟಿಸಿದರು.

ಉದ್ಘಾಟನೆ ಬಳಿಕ ಮಾತನಾಡಿದ ಅವರು, “ಜಾತ್ರೆಗೆ ಸರ್ಕಾರದ ವತಿಯಿಂದ ಮೂಲಭೂತ ಸೌಲಭ್ಯಗಳ ಜೊತೆಗೆ ಉಚಿತ ನೀರು ಮತ್ತು ಆಹಾರ ವ್ಯವಸ್ಥೆ ಮಾಡಲಾಗಿದೆ. ವೇದಿಕೆಯವರು ಉಚಿತ ಮೇವು ವಿತರಿಸುತ್ತಿರುವುದು ರೈತರಿಗೆ ಸಹಾಯಕವಾಗಿದೆ. ಜಾತ್ರೆಗೆ ಆಗಮಿಸಿರುವ ರೈತರು ಈ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು,” ಎಂದು ಹೇಳಿದರು.

ಜಾತ್ರೆ ಪ್ರದೇಶದಲ್ಲಿ ಅಳವಡಿಸಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಗೂ ಕಟೌಟ್‌ಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.

ವೇದಿಕೆ ಅಧ್ಯಕ್ಷ ಹಳ್ಳಿ ರೈತ ಅಂಬರೀಶ್ ಮಾತನಾಡಿ, “ಜಾತ್ರೆಗೆ ಬರುವ ಜಾನುವಾರುಗಳಿಗೆ ಉಚಿತ ಮೇವು ಮತ್ತು ನೀರು ಒದಗಿಸುವ ಮೂಲಕ ರೈತ ಸಮುದಾಯವನ್ನು ಬೆಂಬಲಿಸುವುದು ವೇದಿಕೆಯ ಉದ್ದೇಶ. ಈ ಸೇವೆಯನ್ನು ಮೂರು ವರ್ಷಗಳಿಂದ ನಿರಂತರವಾಗಿ ನೀಡುತ್ತಿದ್ದೇವೆ,” ಎಂದು ಹೇಳಿದರು.

ವೇದಿಕೆ ಕಾರ್ಯದರ್ಶಿ ಉದಯ ಆರಾಧ್ಯ ಮಾತನಾಡಿ, “ಇಂದು ಆರಂಭವಾದ ಮೇವು ವಿತರಣೆ ಇನ್ನೂ ಮೂರು–ನಾಲ್ಕು ದಿನ ನಡೆಯಲಿದೆ. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳ ರೈತರಿಗೆ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ,” ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಘಾಟಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಂಗಪ್ಪ, ಪ್ರಗತಿಪರ ರೈತ ಭಾಸ್ಕರ್, ಕನ್ನಡ ಪರ ಹೋರಾಟಗಾರ ಪರಮೇಶ್, ಮುಖಂಡ ಕನಕದಾಸ, ವೇದಿಕೆಯ ಪದಾಧಿಕಾರಿಗಳಾದ ಶ್ರೀಧರ್, ಮಹೇಶ್, ಹಾಗೂ ಸ್ಥಳೀಯ ರೈತರು ಭಾಗಿಯಾಗಿದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

17 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

20 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

2 days ago