ಘಾಟಿ‌ ದನಗಳ ಜಾತ್ರೆ: ಉಚಿತ ಜಾನುವಾರು ಮೇವು ವಿತರಣೆ ಆರಂಭ

ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯ ಅಂಗವಾಗಿ ನವ ಕರ್ನಾಟಕ ಯುವ ಶಕ್ತಿ ವೇದಿಕೆ ಆಯೋಜಿಸಿದ ಉಚಿತ ಜಾನುವಾರು ಮೇವು ವಿತರಣಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಉದ್ಘಾಟಿಸಿದರು.

ಉದ್ಘಾಟನೆ ಬಳಿಕ ಮಾತನಾಡಿದ ಅವರು, “ಜಾತ್ರೆಗೆ ಸರ್ಕಾರದ ವತಿಯಿಂದ ಮೂಲಭೂತ ಸೌಲಭ್ಯಗಳ ಜೊತೆಗೆ ಉಚಿತ ನೀರು ಮತ್ತು ಆಹಾರ ವ್ಯವಸ್ಥೆ ಮಾಡಲಾಗಿದೆ. ವೇದಿಕೆಯವರು ಉಚಿತ ಮೇವು ವಿತರಿಸುತ್ತಿರುವುದು ರೈತರಿಗೆ ಸಹಾಯಕವಾಗಿದೆ. ಜಾತ್ರೆಗೆ ಆಗಮಿಸಿರುವ ರೈತರು ಈ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು,” ಎಂದು ಹೇಳಿದರು.

ಜಾತ್ರೆ ಪ್ರದೇಶದಲ್ಲಿ ಅಳವಡಿಸಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಗೂ ಕಟೌಟ್‌ಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.

ವೇದಿಕೆ ಅಧ್ಯಕ್ಷ ಹಳ್ಳಿ ರೈತ ಅಂಬರೀಶ್ ಮಾತನಾಡಿ, “ಜಾತ್ರೆಗೆ ಬರುವ ಜಾನುವಾರುಗಳಿಗೆ ಉಚಿತ ಮೇವು ಮತ್ತು ನೀರು ಒದಗಿಸುವ ಮೂಲಕ ರೈತ ಸಮುದಾಯವನ್ನು ಬೆಂಬಲಿಸುವುದು ವೇದಿಕೆಯ ಉದ್ದೇಶ. ಈ ಸೇವೆಯನ್ನು ಮೂರು ವರ್ಷಗಳಿಂದ ನಿರಂತರವಾಗಿ ನೀಡುತ್ತಿದ್ದೇವೆ,” ಎಂದು ಹೇಳಿದರು.

ವೇದಿಕೆ ಕಾರ್ಯದರ್ಶಿ ಉದಯ ಆರಾಧ್ಯ ಮಾತನಾಡಿ, “ಇಂದು ಆರಂಭವಾದ ಮೇವು ವಿತರಣೆ ಇನ್ನೂ ಮೂರು–ನಾಲ್ಕು ದಿನ ನಡೆಯಲಿದೆ. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳ ರೈತರಿಗೆ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ,” ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಘಾಟಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಂಗಪ್ಪ, ಪ್ರಗತಿಪರ ರೈತ ಭಾಸ್ಕರ್, ಕನ್ನಡ ಪರ ಹೋರಾಟಗಾರ ಪರಮೇಶ್, ಮುಖಂಡ ಕನಕದಾಸ, ವೇದಿಕೆಯ ಪದಾಧಿಕಾರಿಗಳಾದ ಶ್ರೀಧರ್, ಮಹೇಶ್, ಹಾಗೂ ಸ್ಥಳೀಯ ರೈತರು ಭಾಗಿಯಾಗಿದ್ದರು.

Ramesh Babu

Journalist

Recent Posts

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

10 hours ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

1 day ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

3 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

4 days ago