ಘಾಟಿ ದನಗಳ ಜಾತ್ರೆ: ರಾಸುಗಳಿಗೆ ಉಚಿತ ಮೇವು, ರೈತರಿಗೆ ಊಟದ ವ್ಯವಸ್ಥೆ ಕಲ್ಪಿಸಿದ ವಕೀಲ, ಬಿಜೆಪಿ ಮುಖಂಡ ಪ್ರತಾಪ್

ಕೊರೊನಾ ವೈರಸ್ ಹಾಗು ಚರ್ಮ ಗಂಟು ರೋಗದಿಂದ ಮೂರು ವರ್ಷಗಳ ಕಾಲ ಇತಿಹಾಸ ಪ್ರಸಿದ್ಧ ಘಾಟಿ ದನಗಳ ಜಾತ್ರೆ ನಡೆದಿರಲಿಲ್ಲ. ಈ ಬಾರಿ ಅದ್ಧೂರಿಯಾಗಿ ಜಾತ್ರೆ ನಡೆಯುತ್ತಿದ್ದು, ಬಹಳಷ್ಟು ಸಂಖ್ಯೆಯಲ್ಲಿ ರಾಸುಗಳ ಮಾರಾಟ ಮಾಡಲು ಬಂದಿದ್ದಾರೆ. ಬಿಜೆಪಿ ಯುವ ಮೋರ್ಚಾದಿಂದ ಮೂರು ದಿವಸಗಳ ಕಾಲ ಜಾನುವಾರುಗಳಿಗೆ ಉಚಿತವಾಗಿ ಮೇವು ಮತ್ತು ರೈತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ, ರೈತರು ಇದನ್ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಕೀಲರು, ಬಿಜೆಪಿ ಮುಖಂಡ ಪ್ರತಾಪ್ ತಿಳಿಸಿದರು.

ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಕ್ಷೇತ್ರದಲ್ಲಿ ಭಾರೀ ದನಗಳ ಜಾತ್ರೆ ಪ್ರಯುಕ್ತ ರೈತರಿಗೆ ಊಟದ ವ್ಯವಸ್ಥೆ, ಹಾಗೂ ರಾಸುಗಳಿಗೆ ಉಚಿತವಾಗಿ ಮೇವನ್ನು ವಿತರಿಸಿ ಮಾತನಾಡಿದ ಅವರು, ದೂರದ ಊರುಗಳಿಂದ ರೈತರು ಜಾತ್ರೆಗೆ ಬಂದಿರುತ್ತಾರೆ. ಅವರ ಹಸಿವನ್ನ ನೀಗಿಸುವುದು ನಮ್ಮ ಕರ್ತವ್ಯ. ಆದ್ದರಿಂದ ಊಟದ ವ್ಯವಸ್ಥೆ ಕಲ್ಪಿಸಲಾಗಿದೆಮ ಅದೇರೀತಿ ರಾಸುಗಳಿಗೆ ಮೇವನ್ನ ಸಹ ನೀಡಲಾಗಿದೆ ಎಂದರು.

ಇದೆ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಓಬದೇನಹಳ್ಳಿ ಮುನಿಯಪ್ಪ, ಘಾಟಿ ಪಂಚಾಯ್ತಿ ಸದಸ್ಯ ವಾಸುದೇವ್, ತೂಬಗೆರೆ ಗ್ರಾಮ ಪಂ. ಸದಸ್ಯ ಕೃಷ್ಣಪ್ಪ, ಬಿಜೆಪಿ ಮುಖಂಡ ಗಂಗರಾಜು, ಲಗುಮಯ್ಯ, ಸುರೇಶ್, ಶರತ್, ಹರ್ಷ‌ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

Ramesh Babu

Journalist

Recent Posts

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

19 minutes ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

12 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

13 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

15 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

17 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

19 hours ago