ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಶ್ರೀ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯು ದಕ್ಷಿಣ ಭಾರತದಲ್ಲೇ ಹೆಚ್ಚು ಪ್ರಸಿದ್ಧಿ ಪಡೆದಿದೆ. ಈ ದನಗಳ ಜಾತ್ರೆ ಡಿ.10ರಿಂದ ಪ್ರಾರಂಭವಾಗಿದೆ. ತುಂಬು ಜಾತ್ರೆಗೆ ದೂರದ ಊರುಗಳಿಂದ ಹೊರಿಗಳೊಂದಿಗೆ ಸಾಲು ಸಾಲಾಗಿ ರೈತರು ಬರುತ್ತಿದ್ದಾರೆ. ದೂರದ ಊರುಗಳಿಂದ ಬಂದಿರುವ ರೈತರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ವಕೀಲ ಪ್ರತಾಪ್ ಹೇಳಿದರು.
ಘಾಟಿ ದನಗಳ ಜಾತ್ರೆಯಲ್ಲಿ ರೈತರಿಗೆ ಊಟ ವಿನಿಯೋಗದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಾನದಲ್ಲೇ ಶ್ರೇಷ್ಠದಾನ ಅನ್ನದಾನ. ದೂರದ ಊರುಗಳಿಂದ ರೈತರು ಜಾತ್ರೆಗೆ ಬಂದಿರುತ್ತಾರೆ. ಅವರ ಹಸಿವನ್ನ ನೀಗಿಸುವುದು ನಮ್ಮ ಕರ್ತವ್ಯ. ಆದ್ದರಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಅನ್ನದಾನವನ್ನು ಮೂರು ದಿನಗಳ ಕಾಲ ವಿತರಣೆ ಮಾಡಲಾಗುತ್ತದೆ. ರೈತರು ಇದನ್ನ ಸದುಪಯೋಗ ಪಡೆದುಕೊಳ್ಳಬೇಕು. ಇದರ ಜೊತೆಗೆ ಹಣ್ಣು ಹಂಪಲುಗಳನ್ನು ರೈತರಿಗೆ ವಿತರಣೆ ಮಾಡಿದ್ದೇವೆ ಎಂದರು.
ಈ ವೇಳೆ ಘಾಟಿ ಗ್ರಾಮ ಪಂಚಾಯಿತಿ ಸದಸ್ಯ ವಾಸು, ಕಿಟ್ಟಿ, ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ್ಯ ಆನಂದ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…