ಘಾಟಿ ಭಾರೀ ದನಗಳ ಜಾತ್ರೆಗೆ ಜಿಲ್ಲಾಡಳಿತದಿಂದ ನಿಷೇಧ; ಸ್ವಯಂಪ್ರೇರಿತರಾಗಿ ಜಾತ್ರೆಗೆ ದನಗಳನ್ನ ತರುತ್ತಿರುವ ರೈತರು

ಚರ್ಮಗಂಟು ರೋಗ ಉಲ್ಬಣಗೊಂಡಿರುವ ಹಿನ್ನೆಲೆ ಪಶುಗಳ ಆರೋಗ್ಯ ದೃಷ್ಟಿಯಿಂದ ಹಾಗೂ ಚರ್ಮಗಂಟು ರೋಗ ತಡೆಯುವ ಉದ್ದೇಶದಿಂದ ಜಿಲ್ಲಾಡಳಿತ ವತಿಯಿಂದ ಜಿಲ್ಲೆಯಲ್ಲಿ ಜಾನುವಾರುಗಳ ಸಾಗಾಣಿಕೆ ಮತ್ತು ಜಾನುವಾರುಗಳ ಜಾತ್ರೆ, ಸಂತೆ ನಿಷೇಧಿಸಲಾಗಿತ್ತು.

ಜಿಲ್ಲಾಡಳಿತದ ನಿಷೇಧದ ನಡುವೆಯು ಘಾಟಿ ದನಗಳ ಜಾತ್ರೆ ಪ್ರಾರಂಭವಾಗಿದೆ, ಸ್ವಯಂಪ್ರೇರಿತರಾಗಿ ರೈತರು ದನಗಳ ವ್ಯಾಪಾರಕ್ಕೆ ಸಜ್ಜು ಮಾಡಿಕೊಳ್ಳುತ್ತಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುವ ದನಗಳ ಜಾತ್ರೆ ದಕ್ಷಿಣ ಭಾರತದಲ್ಲೇ ಪ್ರಸಿದ್ಧಿಯನ್ನ ಪಡೆದಿದೆ. ಘಾಟಿ ದನಗಳ ಜಾತ್ರೆ ತಮಿಳುನಾಡು, ಆಂಧ್ರಪ್ರದೇಶ ರೈತರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ದನಗಳ ವ್ಯಾಪಾರಕ್ಕೆ ರೈತರು ಘಾಟಿಗೆ ಬರುತ್ತಾರೆ.

2022ರ ಸಾಲಿನ ಘಾಟಿ ದನಗಳ ಜಾತ್ರೆ ಡಿಸೆಂಬರ್ 20 ನಡೆಯಬೇಕಿತ್ತು, ಆದರೆ ಜಿಲ್ಲೆಯಲ್ಲಿ ಚರ್ಮಗಂಟು ರೋಗ ಉಲ್ಬಣಗೊಂಡಿರುವ ಹಿನ್ನೆಲೆ ಜಾನುವಾರುಗಳ ಆರೋಗ್ಯದ ಹಿತದೃಷ್ಟಿಯಿಂದ ಎರಡು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಜಾನುವಾರುಗಳ ಸಂತೆ, ಜಾತ್ರೆ ಮತ್ತು ಸಾಕಣಿಕೆಗೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು, 2022ರ ನವೆಂಬರ್ 30 ರಿಂದ 2023ರ ಜನವರಿ 31ರವರೆಗೂ ನಿಷೇಧದ ಆದೇಶ ಜಾಲ್ತಿಯಲ್ಲಿತ್ತು, ಆದರೆ ದನಗಳ ಜಾತ್ರೆಗೆ ರೈತರ ಒತ್ತಡ ಹೆಚ್ಚಾದ ಹಿನ್ನೆಲೆ ನಿಷೇಧದ ನಡುವೆಯೂ ದನಗಳ ಜಾತ್ರೆ ಘಾಟಿಯಲ್ಲಿ ಪ್ರಾರಂಭವಾಗಿದೆ.

ದನಗಳ ಜಾತ್ರೆ ನಡೆಯದಿದ್ದಾರೆ ಆರ್ಥಿಕ ಸಂಕಷ್ಟದಲ್ಲಿ ರೈತರು

ಜಾನುವಾರುಗಳನ್ನ ಅವಲಂಬಿಸಿ ರೈತರು ಕೃಷಿ ಮಾಡುತ್ತಾರೆ, ವರ್ಷಕ್ಕೊಮ್ಮೆ ನಡೆಯುವ ಘಾಟಿ ದನಗಳ ಜಾತ್ರೆಗೆ ಬರುವ ರೈತರು ತಮಗೆ ಬೇಕಾದ ದನಗಳ ಖರೀದಿ ಮಾಡುತ್ತಾರೆ, ಜೊತೆಗೆ ತಾವು ಜೋಡಿ ಮಾಡಿದ ದನಗಳನ್ನ ಮಾರುವ ಮೂಲಕ ಲಾಭ ಸಹ ಗಳಿಸುತ್ತಾರೆ.

ಆದರೆ ಈ ವರ್ಷ ಚರ್ಮಗಂಟು ರೋಗ ಹಿನ್ನಲೆ ಘಾಟಿ ದನಗಳ ಜಾತ್ರೆಗೆ ನಿಷೇಧಿಸಲಾಗಿತ್ತು, ಕಳೆದೊಂದು ತಿಂಗಳಿಂದ ಆದೇಶಕ್ಕೆ ಬೆಲೆ ಕೊಟ್ಟು ಸುಮ್ಮನಾಗಿದ್ದ ರೈತರು ಸ್ವಯಂ ಪ್ರೇರಿತರಾಗಿ ಜನವರಿ 16 ಯಿಂದ 23 ವರೆಗೂ ದನಗಳ ಜಾತ್ರೆಯನ್ನ ನಡೆಸಿದ್ದಾರೆ.

ವಿಷ ಕುಡಿತ್ತೀವಿ ಹೊರತು ದನಗಳ ಜಾತ್ರೆ ನಿಲ್ಲಿಸಲ್ಲ‌ ಎಂದು ರೈತರ ಪಟ್ಟು

ಪೆಂಡಾಲ್ ಗಳನ್ನು ಹಾಕಿರುವ ರೈತರು ದನಗಳ ವ್ಯಾಪಾರಕ್ಕೆ ಸಿದ್ಧತೆ ನಡೆಸಿದ್ದಾರೆ, ಜಾತ್ರೆಯಿಂದ ತೆರಳುವಂತೆ ಪಶು ಆರೋಗ್ಯಧಿಕಾರಿಗಳು ರೈತರಲ್ಲಿ ಮನವಿ ಮಾಡಿದ್ದಾರೆ, ಅಧಿಕಾರಿಗಳ ಮಾತಿಗೆ ಬಗ್ಗದ ರೈತರು ದನಗಳ ಜಾತ್ರೆ ನಡೆಸುವುದ್ದಾಗಿ ಹಠ ತೊಟ್ಟಿದ್ದಾರೆ, ಒಂದು ವೇಳೆ ದನಗಳ ಜಾತ್ರೆ ನಿಲ್ಲಿಸಲು ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾದರೆ ವಿಷ ಕುಡಿಯುವ ಬೆದರಿಕೆ ಹಾಕಿದ್ದಾರೆ ಕಣ್ಣೂರಿನ ರೈತ ವೆಂಕಟೇಶ್.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

3 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

10 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

13 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

13 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago