ಘಾಟಿ ಭಾರೀ ದನಗಳ ಜಾತ್ರೆಗೆ ಜಿಲ್ಲಾಡಳಿತದಿಂದ ನಿಷೇಧ; ಸ್ವಯಂಪ್ರೇರಿತರಾಗಿ ಜಾತ್ರೆಗೆ ದನಗಳನ್ನ ತರುತ್ತಿರುವ ರೈತರು

ಚರ್ಮಗಂಟು ರೋಗ ಉಲ್ಬಣಗೊಂಡಿರುವ ಹಿನ್ನೆಲೆ ಪಶುಗಳ ಆರೋಗ್ಯ ದೃಷ್ಟಿಯಿಂದ ಹಾಗೂ ಚರ್ಮಗಂಟು ರೋಗ ತಡೆಯುವ ಉದ್ದೇಶದಿಂದ ಜಿಲ್ಲಾಡಳಿತ ವತಿಯಿಂದ ಜಿಲ್ಲೆಯಲ್ಲಿ ಜಾನುವಾರುಗಳ ಸಾಗಾಣಿಕೆ ಮತ್ತು ಜಾನುವಾರುಗಳ ಜಾತ್ರೆ, ಸಂತೆ ನಿಷೇಧಿಸಲಾಗಿತ್ತು.

ಜಿಲ್ಲಾಡಳಿತದ ನಿಷೇಧದ ನಡುವೆಯು ಘಾಟಿ ದನಗಳ ಜಾತ್ರೆ ಪ್ರಾರಂಭವಾಗಿದೆ, ಸ್ವಯಂಪ್ರೇರಿತರಾಗಿ ರೈತರು ದನಗಳ ವ್ಯಾಪಾರಕ್ಕೆ ಸಜ್ಜು ಮಾಡಿಕೊಳ್ಳುತ್ತಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುವ ದನಗಳ ಜಾತ್ರೆ ದಕ್ಷಿಣ ಭಾರತದಲ್ಲೇ ಪ್ರಸಿದ್ಧಿಯನ್ನ ಪಡೆದಿದೆ. ಘಾಟಿ ದನಗಳ ಜಾತ್ರೆ ತಮಿಳುನಾಡು, ಆಂಧ್ರಪ್ರದೇಶ ರೈತರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ದನಗಳ ವ್ಯಾಪಾರಕ್ಕೆ ರೈತರು ಘಾಟಿಗೆ ಬರುತ್ತಾರೆ.

2022ರ ಸಾಲಿನ ಘಾಟಿ ದನಗಳ ಜಾತ್ರೆ ಡಿಸೆಂಬರ್ 20 ನಡೆಯಬೇಕಿತ್ತು, ಆದರೆ ಜಿಲ್ಲೆಯಲ್ಲಿ ಚರ್ಮಗಂಟು ರೋಗ ಉಲ್ಬಣಗೊಂಡಿರುವ ಹಿನ್ನೆಲೆ ಜಾನುವಾರುಗಳ ಆರೋಗ್ಯದ ಹಿತದೃಷ್ಟಿಯಿಂದ ಎರಡು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಜಾನುವಾರುಗಳ ಸಂತೆ, ಜಾತ್ರೆ ಮತ್ತು ಸಾಕಣಿಕೆಗೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು, 2022ರ ನವೆಂಬರ್ 30 ರಿಂದ 2023ರ ಜನವರಿ 31ರವರೆಗೂ ನಿಷೇಧದ ಆದೇಶ ಜಾಲ್ತಿಯಲ್ಲಿತ್ತು, ಆದರೆ ದನಗಳ ಜಾತ್ರೆಗೆ ರೈತರ ಒತ್ತಡ ಹೆಚ್ಚಾದ ಹಿನ್ನೆಲೆ ನಿಷೇಧದ ನಡುವೆಯೂ ದನಗಳ ಜಾತ್ರೆ ಘಾಟಿಯಲ್ಲಿ ಪ್ರಾರಂಭವಾಗಿದೆ.

ದನಗಳ ಜಾತ್ರೆ ನಡೆಯದಿದ್ದಾರೆ ಆರ್ಥಿಕ ಸಂಕಷ್ಟದಲ್ಲಿ ರೈತರು

ಜಾನುವಾರುಗಳನ್ನ ಅವಲಂಬಿಸಿ ರೈತರು ಕೃಷಿ ಮಾಡುತ್ತಾರೆ, ವರ್ಷಕ್ಕೊಮ್ಮೆ ನಡೆಯುವ ಘಾಟಿ ದನಗಳ ಜಾತ್ರೆಗೆ ಬರುವ ರೈತರು ತಮಗೆ ಬೇಕಾದ ದನಗಳ ಖರೀದಿ ಮಾಡುತ್ತಾರೆ, ಜೊತೆಗೆ ತಾವು ಜೋಡಿ ಮಾಡಿದ ದನಗಳನ್ನ ಮಾರುವ ಮೂಲಕ ಲಾಭ ಸಹ ಗಳಿಸುತ್ತಾರೆ.

ಆದರೆ ಈ ವರ್ಷ ಚರ್ಮಗಂಟು ರೋಗ ಹಿನ್ನಲೆ ಘಾಟಿ ದನಗಳ ಜಾತ್ರೆಗೆ ನಿಷೇಧಿಸಲಾಗಿತ್ತು, ಕಳೆದೊಂದು ತಿಂಗಳಿಂದ ಆದೇಶಕ್ಕೆ ಬೆಲೆ ಕೊಟ್ಟು ಸುಮ್ಮನಾಗಿದ್ದ ರೈತರು ಸ್ವಯಂ ಪ್ರೇರಿತರಾಗಿ ಜನವರಿ 16 ಯಿಂದ 23 ವರೆಗೂ ದನಗಳ ಜಾತ್ರೆಯನ್ನ ನಡೆಸಿದ್ದಾರೆ.

ವಿಷ ಕುಡಿತ್ತೀವಿ ಹೊರತು ದನಗಳ ಜಾತ್ರೆ ನಿಲ್ಲಿಸಲ್ಲ‌ ಎಂದು ರೈತರ ಪಟ್ಟು

ಪೆಂಡಾಲ್ ಗಳನ್ನು ಹಾಕಿರುವ ರೈತರು ದನಗಳ ವ್ಯಾಪಾರಕ್ಕೆ ಸಿದ್ಧತೆ ನಡೆಸಿದ್ದಾರೆ, ಜಾತ್ರೆಯಿಂದ ತೆರಳುವಂತೆ ಪಶು ಆರೋಗ್ಯಧಿಕಾರಿಗಳು ರೈತರಲ್ಲಿ ಮನವಿ ಮಾಡಿದ್ದಾರೆ, ಅಧಿಕಾರಿಗಳ ಮಾತಿಗೆ ಬಗ್ಗದ ರೈತರು ದನಗಳ ಜಾತ್ರೆ ನಡೆಸುವುದ್ದಾಗಿ ಹಠ ತೊಟ್ಟಿದ್ದಾರೆ, ಒಂದು ವೇಳೆ ದನಗಳ ಜಾತ್ರೆ ನಿಲ್ಲಿಸಲು ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾದರೆ ವಿಷ ಕುಡಿಯುವ ಬೆದರಿಕೆ ಹಾಕಿದ್ದಾರೆ ಕಣ್ಣೂರಿನ ರೈತ ವೆಂಕಟೇಶ್.

Ramesh Babu

Journalist

Recent Posts

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

49 minutes ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

1 hour ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

4 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

7 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

19 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

20 hours ago