ಘಾಟಿ ಭಾರೀ ದನಗಳ ಜಾತ್ರೆಗೆ ಜಿಲ್ಲಾಡಳಿತದಿಂದ ನಿಷೇಧ; ಸ್ವಯಂಪ್ರೇರಿತರಾಗಿ ಜಾತ್ರೆಗೆ ದನಗಳನ್ನ ತರುತ್ತಿರುವ ರೈತರು

ಚರ್ಮಗಂಟು ರೋಗ ಉಲ್ಬಣಗೊಂಡಿರುವ ಹಿನ್ನೆಲೆ ಪಶುಗಳ ಆರೋಗ್ಯ ದೃಷ್ಟಿಯಿಂದ ಹಾಗೂ ಚರ್ಮಗಂಟು ರೋಗ ತಡೆಯುವ ಉದ್ದೇಶದಿಂದ ಜಿಲ್ಲಾಡಳಿತ ವತಿಯಿಂದ ಜಿಲ್ಲೆಯಲ್ಲಿ ಜಾನುವಾರುಗಳ ಸಾಗಾಣಿಕೆ ಮತ್ತು ಜಾನುವಾರುಗಳ ಜಾತ್ರೆ, ಸಂತೆ ನಿಷೇಧಿಸಲಾಗಿತ್ತು.

ಜಿಲ್ಲಾಡಳಿತದ ನಿಷೇಧದ ನಡುವೆಯು ಘಾಟಿ ದನಗಳ ಜಾತ್ರೆ ಪ್ರಾರಂಭವಾಗಿದೆ, ಸ್ವಯಂಪ್ರೇರಿತರಾಗಿ ರೈತರು ದನಗಳ ವ್ಯಾಪಾರಕ್ಕೆ ಸಜ್ಜು ಮಾಡಿಕೊಳ್ಳುತ್ತಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುವ ದನಗಳ ಜಾತ್ರೆ ದಕ್ಷಿಣ ಭಾರತದಲ್ಲೇ ಪ್ರಸಿದ್ಧಿಯನ್ನ ಪಡೆದಿದೆ. ಘಾಟಿ ದನಗಳ ಜಾತ್ರೆ ತಮಿಳುನಾಡು, ಆಂಧ್ರಪ್ರದೇಶ ರೈತರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ದನಗಳ ವ್ಯಾಪಾರಕ್ಕೆ ರೈತರು ಘಾಟಿಗೆ ಬರುತ್ತಾರೆ.

2022ರ ಸಾಲಿನ ಘಾಟಿ ದನಗಳ ಜಾತ್ರೆ ಡಿಸೆಂಬರ್ 20 ನಡೆಯಬೇಕಿತ್ತು, ಆದರೆ ಜಿಲ್ಲೆಯಲ್ಲಿ ಚರ್ಮಗಂಟು ರೋಗ ಉಲ್ಬಣಗೊಂಡಿರುವ ಹಿನ್ನೆಲೆ ಜಾನುವಾರುಗಳ ಆರೋಗ್ಯದ ಹಿತದೃಷ್ಟಿಯಿಂದ ಎರಡು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಜಾನುವಾರುಗಳ ಸಂತೆ, ಜಾತ್ರೆ ಮತ್ತು ಸಾಕಣಿಕೆಗೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು, 2022ರ ನವೆಂಬರ್ 30 ರಿಂದ 2023ರ ಜನವರಿ 31ರವರೆಗೂ ನಿಷೇಧದ ಆದೇಶ ಜಾಲ್ತಿಯಲ್ಲಿತ್ತು, ಆದರೆ ದನಗಳ ಜಾತ್ರೆಗೆ ರೈತರ ಒತ್ತಡ ಹೆಚ್ಚಾದ ಹಿನ್ನೆಲೆ ನಿಷೇಧದ ನಡುವೆಯೂ ದನಗಳ ಜಾತ್ರೆ ಘಾಟಿಯಲ್ಲಿ ಪ್ರಾರಂಭವಾಗಿದೆ.

ದನಗಳ ಜಾತ್ರೆ ನಡೆಯದಿದ್ದಾರೆ ಆರ್ಥಿಕ ಸಂಕಷ್ಟದಲ್ಲಿ ರೈತರು

ಜಾನುವಾರುಗಳನ್ನ ಅವಲಂಬಿಸಿ ರೈತರು ಕೃಷಿ ಮಾಡುತ್ತಾರೆ, ವರ್ಷಕ್ಕೊಮ್ಮೆ ನಡೆಯುವ ಘಾಟಿ ದನಗಳ ಜಾತ್ರೆಗೆ ಬರುವ ರೈತರು ತಮಗೆ ಬೇಕಾದ ದನಗಳ ಖರೀದಿ ಮಾಡುತ್ತಾರೆ, ಜೊತೆಗೆ ತಾವು ಜೋಡಿ ಮಾಡಿದ ದನಗಳನ್ನ ಮಾರುವ ಮೂಲಕ ಲಾಭ ಸಹ ಗಳಿಸುತ್ತಾರೆ.

ಆದರೆ ಈ ವರ್ಷ ಚರ್ಮಗಂಟು ರೋಗ ಹಿನ್ನಲೆ ಘಾಟಿ ದನಗಳ ಜಾತ್ರೆಗೆ ನಿಷೇಧಿಸಲಾಗಿತ್ತು, ಕಳೆದೊಂದು ತಿಂಗಳಿಂದ ಆದೇಶಕ್ಕೆ ಬೆಲೆ ಕೊಟ್ಟು ಸುಮ್ಮನಾಗಿದ್ದ ರೈತರು ಸ್ವಯಂ ಪ್ರೇರಿತರಾಗಿ ಜನವರಿ 16 ಯಿಂದ 23 ವರೆಗೂ ದನಗಳ ಜಾತ್ರೆಯನ್ನ ನಡೆಸಿದ್ದಾರೆ.

ವಿಷ ಕುಡಿತ್ತೀವಿ ಹೊರತು ದನಗಳ ಜಾತ್ರೆ ನಿಲ್ಲಿಸಲ್ಲ‌ ಎಂದು ರೈತರ ಪಟ್ಟು

ಪೆಂಡಾಲ್ ಗಳನ್ನು ಹಾಕಿರುವ ರೈತರು ದನಗಳ ವ್ಯಾಪಾರಕ್ಕೆ ಸಿದ್ಧತೆ ನಡೆಸಿದ್ದಾರೆ, ಜಾತ್ರೆಯಿಂದ ತೆರಳುವಂತೆ ಪಶು ಆರೋಗ್ಯಧಿಕಾರಿಗಳು ರೈತರಲ್ಲಿ ಮನವಿ ಮಾಡಿದ್ದಾರೆ, ಅಧಿಕಾರಿಗಳ ಮಾತಿಗೆ ಬಗ್ಗದ ರೈತರು ದನಗಳ ಜಾತ್ರೆ ನಡೆಸುವುದ್ದಾಗಿ ಹಠ ತೊಟ್ಟಿದ್ದಾರೆ, ಒಂದು ವೇಳೆ ದನಗಳ ಜಾತ್ರೆ ನಿಲ್ಲಿಸಲು ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾದರೆ ವಿಷ ಕುಡಿಯುವ ಬೆದರಿಕೆ ಹಾಕಿದ್ದಾರೆ ಕಣ್ಣೂರಿನ ರೈತ ವೆಂಕಟೇಶ್.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

8 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

8 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

9 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

10 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

13 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

13 hours ago