ಚರ್ಮಗಂಟು ರೋಗ ಉಲ್ಬಣಗೊಂಡಿರುವ ಹಿನ್ನೆಲೆ ಪಶುಗಳ ಆರೋಗ್ಯ ದೃಷ್ಟಿಯಿಂದ ಹಾಗೂ ಚರ್ಮಗಂಟು ರೋಗ ತಡೆಯುವ ಉದ್ದೇಶದಿಂದ ಜಿಲ್ಲಾಡಳಿತ ವತಿಯಿಂದ ಜಿಲ್ಲೆಯಲ್ಲಿ ಜಾನುವಾರುಗಳ ಸಾಗಾಣಿಕೆ ಮತ್ತು ಜಾನುವಾರುಗಳ ಜಾತ್ರೆ, ಸಂತೆ ನಿಷೇಧಿಸಲಾಗಿತ್ತು.
ಜಿಲ್ಲಾಡಳಿತದ ನಿಷೇಧದ ನಡುವೆಯು ಘಾಟಿ ದನಗಳ ಜಾತ್ರೆ ಪ್ರಾರಂಭವಾಗಿದೆ, ಸ್ವಯಂಪ್ರೇರಿತರಾಗಿ ರೈತರು ದನಗಳ ವ್ಯಾಪಾರಕ್ಕೆ ಸಜ್ಜು ಮಾಡಿಕೊಳ್ಳುತ್ತಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುವ ದನಗಳ ಜಾತ್ರೆ ದಕ್ಷಿಣ ಭಾರತದಲ್ಲೇ ಪ್ರಸಿದ್ಧಿಯನ್ನ ಪಡೆದಿದೆ. ಘಾಟಿ ದನಗಳ ಜಾತ್ರೆ ತಮಿಳುನಾಡು, ಆಂಧ್ರಪ್ರದೇಶ ರೈತರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ದನಗಳ ವ್ಯಾಪಾರಕ್ಕೆ ರೈತರು ಘಾಟಿಗೆ ಬರುತ್ತಾರೆ.
2022ರ ಸಾಲಿನ ಘಾಟಿ ದನಗಳ ಜಾತ್ರೆ ಡಿಸೆಂಬರ್ 20 ನಡೆಯಬೇಕಿತ್ತು, ಆದರೆ ಜಿಲ್ಲೆಯಲ್ಲಿ ಚರ್ಮಗಂಟು ರೋಗ ಉಲ್ಬಣಗೊಂಡಿರುವ ಹಿನ್ನೆಲೆ ಜಾನುವಾರುಗಳ ಆರೋಗ್ಯದ ಹಿತದೃಷ್ಟಿಯಿಂದ ಎರಡು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಜಾನುವಾರುಗಳ ಸಂತೆ, ಜಾತ್ರೆ ಮತ್ತು ಸಾಕಣಿಕೆಗೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು, 2022ರ ನವೆಂಬರ್ 30 ರಿಂದ 2023ರ ಜನವರಿ 31ರವರೆಗೂ ನಿಷೇಧದ ಆದೇಶ ಜಾಲ್ತಿಯಲ್ಲಿತ್ತು, ಆದರೆ ದನಗಳ ಜಾತ್ರೆಗೆ ರೈತರ ಒತ್ತಡ ಹೆಚ್ಚಾದ ಹಿನ್ನೆಲೆ ನಿಷೇಧದ ನಡುವೆಯೂ ದನಗಳ ಜಾತ್ರೆ ಘಾಟಿಯಲ್ಲಿ ಪ್ರಾರಂಭವಾಗಿದೆ.
ದನಗಳ ಜಾತ್ರೆ ನಡೆಯದಿದ್ದಾರೆ ಆರ್ಥಿಕ ಸಂಕಷ್ಟದಲ್ಲಿ ರೈತರು
ಜಾನುವಾರುಗಳನ್ನ ಅವಲಂಬಿಸಿ ರೈತರು ಕೃಷಿ ಮಾಡುತ್ತಾರೆ, ವರ್ಷಕ್ಕೊಮ್ಮೆ ನಡೆಯುವ ಘಾಟಿ ದನಗಳ ಜಾತ್ರೆಗೆ ಬರುವ ರೈತರು ತಮಗೆ ಬೇಕಾದ ದನಗಳ ಖರೀದಿ ಮಾಡುತ್ತಾರೆ, ಜೊತೆಗೆ ತಾವು ಜೋಡಿ ಮಾಡಿದ ದನಗಳನ್ನ ಮಾರುವ ಮೂಲಕ ಲಾಭ ಸಹ ಗಳಿಸುತ್ತಾರೆ.
ಆದರೆ ಈ ವರ್ಷ ಚರ್ಮಗಂಟು ರೋಗ ಹಿನ್ನಲೆ ಘಾಟಿ ದನಗಳ ಜಾತ್ರೆಗೆ ನಿಷೇಧಿಸಲಾಗಿತ್ತು, ಕಳೆದೊಂದು ತಿಂಗಳಿಂದ ಆದೇಶಕ್ಕೆ ಬೆಲೆ ಕೊಟ್ಟು ಸುಮ್ಮನಾಗಿದ್ದ ರೈತರು ಸ್ವಯಂ ಪ್ರೇರಿತರಾಗಿ ಜನವರಿ 16 ಯಿಂದ 23 ವರೆಗೂ ದನಗಳ ಜಾತ್ರೆಯನ್ನ ನಡೆಸಿದ್ದಾರೆ.
ವಿಷ ಕುಡಿತ್ತೀವಿ ಹೊರತು ದನಗಳ ಜಾತ್ರೆ ನಿಲ್ಲಿಸಲ್ಲ ಎಂದು ರೈತರ ಪಟ್ಟು
ಪೆಂಡಾಲ್ ಗಳನ್ನು ಹಾಕಿರುವ ರೈತರು ದನಗಳ ವ್ಯಾಪಾರಕ್ಕೆ ಸಿದ್ಧತೆ ನಡೆಸಿದ್ದಾರೆ, ಜಾತ್ರೆಯಿಂದ ತೆರಳುವಂತೆ ಪಶು ಆರೋಗ್ಯಧಿಕಾರಿಗಳು ರೈತರಲ್ಲಿ ಮನವಿ ಮಾಡಿದ್ದಾರೆ, ಅಧಿಕಾರಿಗಳ ಮಾತಿಗೆ ಬಗ್ಗದ ರೈತರು ದನಗಳ ಜಾತ್ರೆ ನಡೆಸುವುದ್ದಾಗಿ ಹಠ ತೊಟ್ಟಿದ್ದಾರೆ, ಒಂದು ವೇಳೆ ದನಗಳ ಜಾತ್ರೆ ನಿಲ್ಲಿಸಲು ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾದರೆ ವಿಷ ಕುಡಿಯುವ ಬೆದರಿಕೆ ಹಾಕಿದ್ದಾರೆ ಕಣ್ಣೂರಿನ ರೈತ ವೆಂಕಟೇಶ್.
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
Das Schreiben einer Facharbeit stellt für viele Schüler und Studenten eine große Herausforderung dar. Der…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…