ಘಾಟಿ ಭಾರೀ ದನಗಳ ಜಾತ್ರೆಗೆ ದಿನಗಣನೆ: ರೈತರಿಗೆ ಸುಂಕ ವಿನಾಯಿತಿ: ಮೂಲಭೂತ ಸೌಕರ್ಯ ಒದಗಿಸುವಂತೆ ರೈತ ಸಂಘ ಮನವಿ

ಡಿಸೆಂಬರ್ ತಿಂಗಳಿನಲ್ಲಿ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರಖ್ಯಾತ ಭಾರೀ ದನಗಳ ಜಾತ್ರೆ ನಡೆಯಲಿದ್ದು, ದನಗಳ ಜಾತ್ರೆಗೆ ಆಗಮಿಸುವ ರಾಸುಗಳಿಗೆ ಸುಂಕ ವಿನಾಯಿತಿ ಸೇರಿದಂತೆ ರೈತರ ವ್ಯಾಪಾರಕ್ಕೆ ಸೂಕ್ತ ಅನುಕೂಲ ಕಲ್ಪಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ನವ ಕರ್ನಾಟಕ ಯುವಶಕ್ತಿ ವೇದಿಕೆ ನೇತೃತ್ವದಲ್ಲಿ ರೈತರು ಘಾಟಿ ಸುಬ್ರಹ್ಮಣ್ಯ  ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ.ದಿನೇಶ್ ಅವರಿಗೆ ಮನವಿ ಮಾಡಿದ್ದಾರೆ.

ಈ ರೈತ ಮುಖಂಡರು ಮಾತನಾಡಿ, ತಾಲೂಕಿನ ಘಾಟಿ ಕ್ಷೇತ್ರದಲ್ಲಿ ನಡೆಯುವ ಅಂತಾರಾಜ್ಯ ಭಾರೀ ದನಗಳ ಜಾತ್ರೆ ಕರ್ನಾಟಕದ ಪ್ರಮುಖ ಪಶುಜಾತ್ರೆಗಳಲ್ಲಿ ಒಂದಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ವಿಭಿನ್ನ ಭಾಗಗಳಿಂದ ಹಾಗೂ ನೆರೆ ರಾಜ್ಯಗಳಿಂದ ಸಾಕಾಣಿಕೆದಾರರು ತಮ್ಮ ದನಗಳನ್ನು ವಾಹನಗಳಲ್ಲಿ ಸಾಗಿಸಿ ಭಾಗವಹಿಸುತ್ತಾರೆ. ರೈತರಿಗೆ ಸುಂಕ ವಿನಾಯಿತಿ ನೀಡುವಂತೆ ಈ ಹಿಂದೆಯೂ ಕೂಡ ಮನವಿ ಸಲ್ಲಿಸಲಾಗಿತ್ತು, ಜಾತ್ರೆಯಲ್ಲಿ ಅದನ್ನು ಪ್ರಾಧಿಕಾರವು ಪರಿಗಣಿಸಿ ವಾಹನ ಸುಂಕ ವಿನಾಯಿತಿ ನೀಡಿತ್ತು. ಈ ಕ್ರಮದಿಂದ ಸಾಕಾಣಿಕಾರರು ಹಾಗೂ ದನ ವ್ಯಾಪಾರಿಗಳು ಬಹಳ ಉಪಯೋಗ ಪಡೆದುಕೊಂಡಿದ್ದರು. ಈ ವರ್ಷವೂ ಅದೇ ರೀತಿಯಾಗಿ, ಜಾತ್ರೆ ಅವಧಿಯಲ್ಲಿ ರಾಸುಗಳನ್ನು ಸಾಗಿಸುವ ವಾಹನಗಳಿಗೆ ವಾಹನ ಸುಂಕ ವಿನಾಯಿತಿ ನೀಡಬೇಕಿದೆ. ಇದು ಸಾಕಾಣಿಕೆದಾರರ ಹಿತಾಸಕ್ತಿಗೆ ಪೂರಕವಾಗಿದ್ದು, ಘಾಟಿ ಸುಬ್ರಹ್ಮಣ್ಯ ಅಂತಾರಾಜ್ಯ ಭಾರಿ ದನಗಳ ಜಾತ್ರೆಯ ಯಶಸ್ವಿ ಆಯೋಜನೆಗೆ ಸಹಕಾರಿಯಾಗಲಿದೆ. ಪ್ರಾಧಿಕಾರದಿಂದ ರೈತರಿಗೆ ಮೂಲ ಸೌಕರ್ಯಗಳನ್ನು ನೀಡುತ್ತಿರುವುದು ಸ್ವಾಗತಾರ್ಹ. ಅಂತೆಯೇ ರಾಸುಗಳ ಸೇರುವ ಜಾಗದಲ್ಲಿ ತೋಟಗಳ ಮಾಲೀಕರು ಕಾಂಪೌಂಡ್ಗಳನ್ನು ಹಾಕಿಕೊಂಡಿದ್ದು, ಅವರಿಗೆ ಮನವಿ ಮಾಡಿ ತೆರವು ಮಾಡಿಕೊಟ್ಟು, ವ್ಯಾಪಾರಕ್ಕೆ ಅನುಕೂಲ ಕಲ್ಪಿಸಬೇಕಿದೆ. ರಾತ್ರಿ ಸಮಯದಲ್ಲಿ ಇಲ್ಲಿ ತಂಗುವ ರೈತರಿಗೆ ಊಟದ ವ್ಯವಸ್ಥೆ ಮಾಡಬೇಕಿದೆ. ರೈತರಿಗೆ ವಿಶ್ರಾಂತಿ ಕೊಠಡಿಗಳನ್ನು ನೀಡಿದರೆ ಹೆಚ್ಚಿನ ಅನುಕೂಲವಾಗಲಿದೆ ಎಂದು  ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಘಾಟಿ ಸುಬ್ರಹ್ಮಣ್ಯ  ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ.ದಿನೇಶ್, ರೈತರು ತರುವ ರಾಸುಗಳಿಗೆ ಹಿಂದೆ ಸುಂಕ ವಿನಾಯಿತಿ ನೀಡಲಾಗಿದ್ದು, ಈ ಬಾರಿಯೂ ಪರಿಶೀಲಿಸಲಾಗುವುದು. ರೈತರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ವೇಳೆ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಹನುಮೇಗೌಡ, ಕಾರ್ಯದರ್ಶಿ ಸತೀಶ್, ಹೋಬಳಿ ಅಧ್ಯಕ್ಷರು ಮುನಿ ರಾಮೇಗೌಡ, ಮುಖಂಡರಾದ   ವಾಸುದೇವ್ , ಮೂರ್ತಿ, ಮುರಳಿ ಹನುಮಂತರಾಯಪ್ಪ, ತಿಪ್ಪೂರು ತಿಮ್ಮಣ್ಣ ಮೊದಲಾದವರು ಹಾಜರಿದ್ದರು.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

3 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

4 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

5 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

15 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

15 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

18 hours ago