ಘಾಟಿ ಭಾರೀ ದನಗಳ ಜಾತ್ರೆಗೆ ದಿನಗಣನೆ: ರೈತರಿಗೆ ಸುಂಕ ವಿನಾಯಿತಿ: ಮೂಲಭೂತ ಸೌಕರ್ಯ ಒದಗಿಸುವಂತೆ ರೈತ ಸಂಘ ಮನವಿ

ಡಿಸೆಂಬರ್ ತಿಂಗಳಿನಲ್ಲಿ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರಖ್ಯಾತ ಭಾರೀ ದನಗಳ ಜಾತ್ರೆ ನಡೆಯಲಿದ್ದು, ದನಗಳ ಜಾತ್ರೆಗೆ ಆಗಮಿಸುವ ರಾಸುಗಳಿಗೆ ಸುಂಕ ವಿನಾಯಿತಿ ಸೇರಿದಂತೆ ರೈತರ ವ್ಯಾಪಾರಕ್ಕೆ ಸೂಕ್ತ ಅನುಕೂಲ ಕಲ್ಪಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ನವ ಕರ್ನಾಟಕ ಯುವಶಕ್ತಿ ವೇದಿಕೆ ನೇತೃತ್ವದಲ್ಲಿ ರೈತರು ಘಾಟಿ ಸುಬ್ರಹ್ಮಣ್ಯ  ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ.ದಿನೇಶ್ ಅವರಿಗೆ ಮನವಿ ಮಾಡಿದ್ದಾರೆ.

ಈ ರೈತ ಮುಖಂಡರು ಮಾತನಾಡಿ, ತಾಲೂಕಿನ ಘಾಟಿ ಕ್ಷೇತ್ರದಲ್ಲಿ ನಡೆಯುವ ಅಂತಾರಾಜ್ಯ ಭಾರೀ ದನಗಳ ಜಾತ್ರೆ ಕರ್ನಾಟಕದ ಪ್ರಮುಖ ಪಶುಜಾತ್ರೆಗಳಲ್ಲಿ ಒಂದಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ವಿಭಿನ್ನ ಭಾಗಗಳಿಂದ ಹಾಗೂ ನೆರೆ ರಾಜ್ಯಗಳಿಂದ ಸಾಕಾಣಿಕೆದಾರರು ತಮ್ಮ ದನಗಳನ್ನು ವಾಹನಗಳಲ್ಲಿ ಸಾಗಿಸಿ ಭಾಗವಹಿಸುತ್ತಾರೆ. ರೈತರಿಗೆ ಸುಂಕ ವಿನಾಯಿತಿ ನೀಡುವಂತೆ ಈ ಹಿಂದೆಯೂ ಕೂಡ ಮನವಿ ಸಲ್ಲಿಸಲಾಗಿತ್ತು, ಜಾತ್ರೆಯಲ್ಲಿ ಅದನ್ನು ಪ್ರಾಧಿಕಾರವು ಪರಿಗಣಿಸಿ ವಾಹನ ಸುಂಕ ವಿನಾಯಿತಿ ನೀಡಿತ್ತು. ಈ ಕ್ರಮದಿಂದ ಸಾಕಾಣಿಕಾರರು ಹಾಗೂ ದನ ವ್ಯಾಪಾರಿಗಳು ಬಹಳ ಉಪಯೋಗ ಪಡೆದುಕೊಂಡಿದ್ದರು. ಈ ವರ್ಷವೂ ಅದೇ ರೀತಿಯಾಗಿ, ಜಾತ್ರೆ ಅವಧಿಯಲ್ಲಿ ರಾಸುಗಳನ್ನು ಸಾಗಿಸುವ ವಾಹನಗಳಿಗೆ ವಾಹನ ಸುಂಕ ವಿನಾಯಿತಿ ನೀಡಬೇಕಿದೆ. ಇದು ಸಾಕಾಣಿಕೆದಾರರ ಹಿತಾಸಕ್ತಿಗೆ ಪೂರಕವಾಗಿದ್ದು, ಘಾಟಿ ಸುಬ್ರಹ್ಮಣ್ಯ ಅಂತಾರಾಜ್ಯ ಭಾರಿ ದನಗಳ ಜಾತ್ರೆಯ ಯಶಸ್ವಿ ಆಯೋಜನೆಗೆ ಸಹಕಾರಿಯಾಗಲಿದೆ. ಪ್ರಾಧಿಕಾರದಿಂದ ರೈತರಿಗೆ ಮೂಲ ಸೌಕರ್ಯಗಳನ್ನು ನೀಡುತ್ತಿರುವುದು ಸ್ವಾಗತಾರ್ಹ. ಅಂತೆಯೇ ರಾಸುಗಳ ಸೇರುವ ಜಾಗದಲ್ಲಿ ತೋಟಗಳ ಮಾಲೀಕರು ಕಾಂಪೌಂಡ್ಗಳನ್ನು ಹಾಕಿಕೊಂಡಿದ್ದು, ಅವರಿಗೆ ಮನವಿ ಮಾಡಿ ತೆರವು ಮಾಡಿಕೊಟ್ಟು, ವ್ಯಾಪಾರಕ್ಕೆ ಅನುಕೂಲ ಕಲ್ಪಿಸಬೇಕಿದೆ. ರಾತ್ರಿ ಸಮಯದಲ್ಲಿ ಇಲ್ಲಿ ತಂಗುವ ರೈತರಿಗೆ ಊಟದ ವ್ಯವಸ್ಥೆ ಮಾಡಬೇಕಿದೆ. ರೈತರಿಗೆ ವಿಶ್ರಾಂತಿ ಕೊಠಡಿಗಳನ್ನು ನೀಡಿದರೆ ಹೆಚ್ಚಿನ ಅನುಕೂಲವಾಗಲಿದೆ ಎಂದು  ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಘಾಟಿ ಸುಬ್ರಹ್ಮಣ್ಯ  ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ.ದಿನೇಶ್, ರೈತರು ತರುವ ರಾಸುಗಳಿಗೆ ಹಿಂದೆ ಸುಂಕ ವಿನಾಯಿತಿ ನೀಡಲಾಗಿದ್ದು, ಈ ಬಾರಿಯೂ ಪರಿಶೀಲಿಸಲಾಗುವುದು. ರೈತರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ವೇಳೆ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಹನುಮೇಗೌಡ, ಕಾರ್ಯದರ್ಶಿ ಸತೀಶ್, ಹೋಬಳಿ ಅಧ್ಯಕ್ಷರು ಮುನಿ ರಾಮೇಗೌಡ, ಮುಖಂಡರಾದ   ವಾಸುದೇವ್ , ಮೂರ್ತಿ, ಮುರಳಿ ಹನುಮಂತರಾಯಪ್ಪ, ತಿಪ್ಪೂರು ತಿಮ್ಮಣ್ಣ ಮೊದಲಾದವರು ಹಾಜರಿದ್ದರು.

Ramesh Babu

Journalist

Recent Posts

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

6 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

9 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

19 hours ago

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌…

22 hours ago

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…

23 hours ago

ದೊಡ್ಡಬಳ್ಳಾಪುರ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕ: ಶ್ರೀ ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ನೂತನ ತಹಶೀಲ್ದಾರ್ ಮಲ್ಲಪ್ಪ

ದೊಡ್ಡಬಳ್ಳಾಪುರದ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕಗೊಂಡಿದ್ದಾರೆ. ಈ ಹಿನ್ನೆಲೆ ಇಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ…

1 day ago