ಘಾಟಿ ಭಾರೀ ದನಗಳ ಜಾತ್ರೆಗೆ ದಿನಗಣನೆ: ರೈತರಿಗೆ ಸುಂಕ ವಿನಾಯಿತಿ: ಮೂಲಭೂತ ಸೌಕರ್ಯ ಒದಗಿಸುವಂತೆ ರೈತ ಸಂಘ ಮನವಿ

ಡಿಸೆಂಬರ್ ತಿಂಗಳಿನಲ್ಲಿ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರಖ್ಯಾತ ಭಾರೀ ದನಗಳ ಜಾತ್ರೆ ನಡೆಯಲಿದ್ದು, ದನಗಳ ಜಾತ್ರೆಗೆ ಆಗಮಿಸುವ ರಾಸುಗಳಿಗೆ ಸುಂಕ ವಿನಾಯಿತಿ ಸೇರಿದಂತೆ ರೈತರ ವ್ಯಾಪಾರಕ್ಕೆ ಸೂಕ್ತ ಅನುಕೂಲ ಕಲ್ಪಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ನವ ಕರ್ನಾಟಕ ಯುವಶಕ್ತಿ ವೇದಿಕೆ ನೇತೃತ್ವದಲ್ಲಿ ರೈತರು ಘಾಟಿ ಸುಬ್ರಹ್ಮಣ್ಯ  ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ.ದಿನೇಶ್ ಅವರಿಗೆ ಮನವಿ ಮಾಡಿದ್ದಾರೆ.

ಈ ರೈತ ಮುಖಂಡರು ಮಾತನಾಡಿ, ತಾಲೂಕಿನ ಘಾಟಿ ಕ್ಷೇತ್ರದಲ್ಲಿ ನಡೆಯುವ ಅಂತಾರಾಜ್ಯ ಭಾರೀ ದನಗಳ ಜಾತ್ರೆ ಕರ್ನಾಟಕದ ಪ್ರಮುಖ ಪಶುಜಾತ್ರೆಗಳಲ್ಲಿ ಒಂದಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ವಿಭಿನ್ನ ಭಾಗಗಳಿಂದ ಹಾಗೂ ನೆರೆ ರಾಜ್ಯಗಳಿಂದ ಸಾಕಾಣಿಕೆದಾರರು ತಮ್ಮ ದನಗಳನ್ನು ವಾಹನಗಳಲ್ಲಿ ಸಾಗಿಸಿ ಭಾಗವಹಿಸುತ್ತಾರೆ. ರೈತರಿಗೆ ಸುಂಕ ವಿನಾಯಿತಿ ನೀಡುವಂತೆ ಈ ಹಿಂದೆಯೂ ಕೂಡ ಮನವಿ ಸಲ್ಲಿಸಲಾಗಿತ್ತು, ಜಾತ್ರೆಯಲ್ಲಿ ಅದನ್ನು ಪ್ರಾಧಿಕಾರವು ಪರಿಗಣಿಸಿ ವಾಹನ ಸುಂಕ ವಿನಾಯಿತಿ ನೀಡಿತ್ತು. ಈ ಕ್ರಮದಿಂದ ಸಾಕಾಣಿಕಾರರು ಹಾಗೂ ದನ ವ್ಯಾಪಾರಿಗಳು ಬಹಳ ಉಪಯೋಗ ಪಡೆದುಕೊಂಡಿದ್ದರು. ಈ ವರ್ಷವೂ ಅದೇ ರೀತಿಯಾಗಿ, ಜಾತ್ರೆ ಅವಧಿಯಲ್ಲಿ ರಾಸುಗಳನ್ನು ಸಾಗಿಸುವ ವಾಹನಗಳಿಗೆ ವಾಹನ ಸುಂಕ ವಿನಾಯಿತಿ ನೀಡಬೇಕಿದೆ. ಇದು ಸಾಕಾಣಿಕೆದಾರರ ಹಿತಾಸಕ್ತಿಗೆ ಪೂರಕವಾಗಿದ್ದು, ಘಾಟಿ ಸುಬ್ರಹ್ಮಣ್ಯ ಅಂತಾರಾಜ್ಯ ಭಾರಿ ದನಗಳ ಜಾತ್ರೆಯ ಯಶಸ್ವಿ ಆಯೋಜನೆಗೆ ಸಹಕಾರಿಯಾಗಲಿದೆ. ಪ್ರಾಧಿಕಾರದಿಂದ ರೈತರಿಗೆ ಮೂಲ ಸೌಕರ್ಯಗಳನ್ನು ನೀಡುತ್ತಿರುವುದು ಸ್ವಾಗತಾರ್ಹ. ಅಂತೆಯೇ ರಾಸುಗಳ ಸೇರುವ ಜಾಗದಲ್ಲಿ ತೋಟಗಳ ಮಾಲೀಕರು ಕಾಂಪೌಂಡ್ಗಳನ್ನು ಹಾಕಿಕೊಂಡಿದ್ದು, ಅವರಿಗೆ ಮನವಿ ಮಾಡಿ ತೆರವು ಮಾಡಿಕೊಟ್ಟು, ವ್ಯಾಪಾರಕ್ಕೆ ಅನುಕೂಲ ಕಲ್ಪಿಸಬೇಕಿದೆ. ರಾತ್ರಿ ಸಮಯದಲ್ಲಿ ಇಲ್ಲಿ ತಂಗುವ ರೈತರಿಗೆ ಊಟದ ವ್ಯವಸ್ಥೆ ಮಾಡಬೇಕಿದೆ. ರೈತರಿಗೆ ವಿಶ್ರಾಂತಿ ಕೊಠಡಿಗಳನ್ನು ನೀಡಿದರೆ ಹೆಚ್ಚಿನ ಅನುಕೂಲವಾಗಲಿದೆ ಎಂದು  ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಘಾಟಿ ಸುಬ್ರಹ್ಮಣ್ಯ  ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ.ದಿನೇಶ್, ರೈತರು ತರುವ ರಾಸುಗಳಿಗೆ ಹಿಂದೆ ಸುಂಕ ವಿನಾಯಿತಿ ನೀಡಲಾಗಿದ್ದು, ಈ ಬಾರಿಯೂ ಪರಿಶೀಲಿಸಲಾಗುವುದು. ರೈತರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ವೇಳೆ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಹನುಮೇಗೌಡ, ಕಾರ್ಯದರ್ಶಿ ಸತೀಶ್, ಹೋಬಳಿ ಅಧ್ಯಕ್ಷರು ಮುನಿ ರಾಮೇಗೌಡ, ಮುಖಂಡರಾದ   ವಾಸುದೇವ್ , ಮೂರ್ತಿ, ಮುರಳಿ ಹನುಮಂತರಾಯಪ್ಪ, ತಿಪ್ಪೂರು ತಿಮ್ಮಣ್ಣ ಮೊದಲಾದವರು ಹಾಜರಿದ್ದರು.

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

4 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

7 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

11 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

12 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

13 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

14 hours ago