ಘಾಟಿ ಭಾರೀ ದನಗಳ ಜಾತ್ರೆಗೆ ದಿನಗಣನೆ: ರೈತರಿಗೆ ಸುಂಕ ವಿನಾಯಿತಿ: ಮೂಲಭೂತ ಸೌಕರ್ಯ ಒದಗಿಸುವಂತೆ ರೈತ ಸಂಘ ಮನವಿ

ಡಿಸೆಂಬರ್ ತಿಂಗಳಿನಲ್ಲಿ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರಖ್ಯಾತ ಭಾರೀ ದನಗಳ ಜಾತ್ರೆ ನಡೆಯಲಿದ್ದು, ದನಗಳ ಜಾತ್ರೆಗೆ ಆಗಮಿಸುವ ರಾಸುಗಳಿಗೆ ಸುಂಕ ವಿನಾಯಿತಿ ಸೇರಿದಂತೆ ರೈತರ ವ್ಯಾಪಾರಕ್ಕೆ ಸೂಕ್ತ ಅನುಕೂಲ ಕಲ್ಪಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ನವ ಕರ್ನಾಟಕ ಯುವಶಕ್ತಿ ವೇದಿಕೆ ನೇತೃತ್ವದಲ್ಲಿ ರೈತರು ಘಾಟಿ ಸುಬ್ರಹ್ಮಣ್ಯ  ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ.ದಿನೇಶ್ ಅವರಿಗೆ ಮನವಿ ಮಾಡಿದ್ದಾರೆ.

ಈ ರೈತ ಮುಖಂಡರು ಮಾತನಾಡಿ, ತಾಲೂಕಿನ ಘಾಟಿ ಕ್ಷೇತ್ರದಲ್ಲಿ ನಡೆಯುವ ಅಂತಾರಾಜ್ಯ ಭಾರೀ ದನಗಳ ಜಾತ್ರೆ ಕರ್ನಾಟಕದ ಪ್ರಮುಖ ಪಶುಜಾತ್ರೆಗಳಲ್ಲಿ ಒಂದಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ವಿಭಿನ್ನ ಭಾಗಗಳಿಂದ ಹಾಗೂ ನೆರೆ ರಾಜ್ಯಗಳಿಂದ ಸಾಕಾಣಿಕೆದಾರರು ತಮ್ಮ ದನಗಳನ್ನು ವಾಹನಗಳಲ್ಲಿ ಸಾಗಿಸಿ ಭಾಗವಹಿಸುತ್ತಾರೆ. ರೈತರಿಗೆ ಸುಂಕ ವಿನಾಯಿತಿ ನೀಡುವಂತೆ ಈ ಹಿಂದೆಯೂ ಕೂಡ ಮನವಿ ಸಲ್ಲಿಸಲಾಗಿತ್ತು, ಜಾತ್ರೆಯಲ್ಲಿ ಅದನ್ನು ಪ್ರಾಧಿಕಾರವು ಪರಿಗಣಿಸಿ ವಾಹನ ಸುಂಕ ವಿನಾಯಿತಿ ನೀಡಿತ್ತು. ಈ ಕ್ರಮದಿಂದ ಸಾಕಾಣಿಕಾರರು ಹಾಗೂ ದನ ವ್ಯಾಪಾರಿಗಳು ಬಹಳ ಉಪಯೋಗ ಪಡೆದುಕೊಂಡಿದ್ದರು. ಈ ವರ್ಷವೂ ಅದೇ ರೀತಿಯಾಗಿ, ಜಾತ್ರೆ ಅವಧಿಯಲ್ಲಿ ರಾಸುಗಳನ್ನು ಸಾಗಿಸುವ ವಾಹನಗಳಿಗೆ ವಾಹನ ಸುಂಕ ವಿನಾಯಿತಿ ನೀಡಬೇಕಿದೆ. ಇದು ಸಾಕಾಣಿಕೆದಾರರ ಹಿತಾಸಕ್ತಿಗೆ ಪೂರಕವಾಗಿದ್ದು, ಘಾಟಿ ಸುಬ್ರಹ್ಮಣ್ಯ ಅಂತಾರಾಜ್ಯ ಭಾರಿ ದನಗಳ ಜಾತ್ರೆಯ ಯಶಸ್ವಿ ಆಯೋಜನೆಗೆ ಸಹಕಾರಿಯಾಗಲಿದೆ. ಪ್ರಾಧಿಕಾರದಿಂದ ರೈತರಿಗೆ ಮೂಲ ಸೌಕರ್ಯಗಳನ್ನು ನೀಡುತ್ತಿರುವುದು ಸ್ವಾಗತಾರ್ಹ. ಅಂತೆಯೇ ರಾಸುಗಳ ಸೇರುವ ಜಾಗದಲ್ಲಿ ತೋಟಗಳ ಮಾಲೀಕರು ಕಾಂಪೌಂಡ್ಗಳನ್ನು ಹಾಕಿಕೊಂಡಿದ್ದು, ಅವರಿಗೆ ಮನವಿ ಮಾಡಿ ತೆರವು ಮಾಡಿಕೊಟ್ಟು, ವ್ಯಾಪಾರಕ್ಕೆ ಅನುಕೂಲ ಕಲ್ಪಿಸಬೇಕಿದೆ. ರಾತ್ರಿ ಸಮಯದಲ್ಲಿ ಇಲ್ಲಿ ತಂಗುವ ರೈತರಿಗೆ ಊಟದ ವ್ಯವಸ್ಥೆ ಮಾಡಬೇಕಿದೆ. ರೈತರಿಗೆ ವಿಶ್ರಾಂತಿ ಕೊಠಡಿಗಳನ್ನು ನೀಡಿದರೆ ಹೆಚ್ಚಿನ ಅನುಕೂಲವಾಗಲಿದೆ ಎಂದು  ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಘಾಟಿ ಸುಬ್ರಹ್ಮಣ್ಯ  ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ.ದಿನೇಶ್, ರೈತರು ತರುವ ರಾಸುಗಳಿಗೆ ಹಿಂದೆ ಸುಂಕ ವಿನಾಯಿತಿ ನೀಡಲಾಗಿದ್ದು, ಈ ಬಾರಿಯೂ ಪರಿಶೀಲಿಸಲಾಗುವುದು. ರೈತರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ವೇಳೆ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಹನುಮೇಗೌಡ, ಕಾರ್ಯದರ್ಶಿ ಸತೀಶ್, ಹೋಬಳಿ ಅಧ್ಯಕ್ಷರು ಮುನಿ ರಾಮೇಗೌಡ, ಮುಖಂಡರಾದ   ವಾಸುದೇವ್ , ಮೂರ್ತಿ, ಮುರಳಿ ಹನುಮಂತರಾಯಪ್ಪ, ತಿಪ್ಪೂರು ತಿಮ್ಮಣ್ಣ ಮೊದಲಾದವರು ಹಾಜರಿದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

10 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

11 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

16 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago