ಡಿಸೆಂಬರ್ ತಿಂಗಳಿನಲ್ಲಿ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರಖ್ಯಾತ ಭಾರೀ ದನಗಳ ಜಾತ್ರೆ ನಡೆಯಲಿದ್ದು, ದನಗಳ ಜಾತ್ರೆಗೆ ಆಗಮಿಸುವ ರಾಸುಗಳಿಗೆ ಸುಂಕ ವಿನಾಯಿತಿ ಸೇರಿದಂತೆ ರೈತರ ವ್ಯಾಪಾರಕ್ಕೆ ಸೂಕ್ತ ಅನುಕೂಲ ಕಲ್ಪಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ನವ ಕರ್ನಾಟಕ ಯುವಶಕ್ತಿ ವೇದಿಕೆ ನೇತೃತ್ವದಲ್ಲಿ ರೈತರು ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ.ದಿನೇಶ್ ಅವರಿಗೆ ಮನವಿ ಮಾಡಿದ್ದಾರೆ.
ಈ ರೈತ ಮುಖಂಡರು ಮಾತನಾಡಿ, ತಾಲೂಕಿನ ಘಾಟಿ ಕ್ಷೇತ್ರದಲ್ಲಿ ನಡೆಯುವ ಅಂತಾರಾಜ್ಯ ಭಾರೀ ದನಗಳ ಜಾತ್ರೆ ಕರ್ನಾಟಕದ ಪ್ರಮುಖ ಪಶುಜಾತ್ರೆಗಳಲ್ಲಿ ಒಂದಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ವಿಭಿನ್ನ ಭಾಗಗಳಿಂದ ಹಾಗೂ ನೆರೆ ರಾಜ್ಯಗಳಿಂದ ಸಾಕಾಣಿಕೆದಾರರು ತಮ್ಮ ದನಗಳನ್ನು ವಾಹನಗಳಲ್ಲಿ ಸಾಗಿಸಿ ಭಾಗವಹಿಸುತ್ತಾರೆ. ರೈತರಿಗೆ ಸುಂಕ ವಿನಾಯಿತಿ ನೀಡುವಂತೆ ಈ ಹಿಂದೆಯೂ ಕೂಡ ಮನವಿ ಸಲ್ಲಿಸಲಾಗಿತ್ತು, ಜಾತ್ರೆಯಲ್ಲಿ ಅದನ್ನು ಪ್ರಾಧಿಕಾರವು ಪರಿಗಣಿಸಿ ವಾಹನ ಸುಂಕ ವಿನಾಯಿತಿ ನೀಡಿತ್ತು. ಈ ಕ್ರಮದಿಂದ ಸಾಕಾಣಿಕಾರರು ಹಾಗೂ ದನ ವ್ಯಾಪಾರಿಗಳು ಬಹಳ ಉಪಯೋಗ ಪಡೆದುಕೊಂಡಿದ್ದರು. ಈ ವರ್ಷವೂ ಅದೇ ರೀತಿಯಾಗಿ, ಜಾತ್ರೆ ಅವಧಿಯಲ್ಲಿ ರಾಸುಗಳನ್ನು ಸಾಗಿಸುವ ವಾಹನಗಳಿಗೆ ವಾಹನ ಸುಂಕ ವಿನಾಯಿತಿ ನೀಡಬೇಕಿದೆ. ಇದು ಸಾಕಾಣಿಕೆದಾರರ ಹಿತಾಸಕ್ತಿಗೆ ಪೂರಕವಾಗಿದ್ದು, ಘಾಟಿ ಸುಬ್ರಹ್ಮಣ್ಯ ಅಂತಾರಾಜ್ಯ ಭಾರಿ ದನಗಳ ಜಾತ್ರೆಯ ಯಶಸ್ವಿ ಆಯೋಜನೆಗೆ ಸಹಕಾರಿಯಾಗಲಿದೆ. ಪ್ರಾಧಿಕಾರದಿಂದ ರೈತರಿಗೆ ಮೂಲ ಸೌಕರ್ಯಗಳನ್ನು ನೀಡುತ್ತಿರುವುದು ಸ್ವಾಗತಾರ್ಹ. ಅಂತೆಯೇ ರಾಸುಗಳ ಸೇರುವ ಜಾಗದಲ್ಲಿ ತೋಟಗಳ ಮಾಲೀಕರು ಕಾಂಪೌಂಡ್ಗಳನ್ನು ಹಾಕಿಕೊಂಡಿದ್ದು, ಅವರಿಗೆ ಮನವಿ ಮಾಡಿ ತೆರವು ಮಾಡಿಕೊಟ್ಟು, ವ್ಯಾಪಾರಕ್ಕೆ ಅನುಕೂಲ ಕಲ್ಪಿಸಬೇಕಿದೆ. ರಾತ್ರಿ ಸಮಯದಲ್ಲಿ ಇಲ್ಲಿ ತಂಗುವ ರೈತರಿಗೆ ಊಟದ ವ್ಯವಸ್ಥೆ ಮಾಡಬೇಕಿದೆ. ರೈತರಿಗೆ ವಿಶ್ರಾಂತಿ ಕೊಠಡಿಗಳನ್ನು ನೀಡಿದರೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ.ದಿನೇಶ್, ರೈತರು ತರುವ ರಾಸುಗಳಿಗೆ ಹಿಂದೆ ಸುಂಕ ವಿನಾಯಿತಿ ನೀಡಲಾಗಿದ್ದು, ಈ ಬಾರಿಯೂ ಪರಿಶೀಲಿಸಲಾಗುವುದು. ರೈತರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಈ ವೇಳೆ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಹನುಮೇಗೌಡ, ಕಾರ್ಯದರ್ಶಿ ಸತೀಶ್, ಹೋಬಳಿ ಅಧ್ಯಕ್ಷರು ಮುನಿ ರಾಮೇಗೌಡ, ಮುಖಂಡರಾದ ವಾಸುದೇವ್ , ಮೂರ್ತಿ, ಮುರಳಿ ಹನುಮಂತರಾಯಪ್ಪ, ತಿಪ್ಪೂರು ತಿಮ್ಮಣ್ಣ ಮೊದಲಾದವರು ಹಾಜರಿದ್ದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…