ಘಾಟಿ ಭಾರೀ ದನಗಳ ಜಾತ್ರೆಗೆ ದಿನಗಣನೆ: ರೈತರಿಗೆ ಸುಂಕ ವಿನಾಯಿತಿ: ಮೂಲಭೂತ ಸೌಕರ್ಯ ಒದಗಿಸುವಂತೆ ರೈತ ಸಂಘ ಮನವಿ

ಡಿಸೆಂಬರ್ ತಿಂಗಳಿನಲ್ಲಿ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರಖ್ಯಾತ ಭಾರೀ ದನಗಳ ಜಾತ್ರೆ ನಡೆಯಲಿದ್ದು, ದನಗಳ ಜಾತ್ರೆಗೆ ಆಗಮಿಸುವ ರಾಸುಗಳಿಗೆ ಸುಂಕ ವಿನಾಯಿತಿ ಸೇರಿದಂತೆ ರೈತರ ವ್ಯಾಪಾರಕ್ಕೆ ಸೂಕ್ತ ಅನುಕೂಲ ಕಲ್ಪಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ನವ ಕರ್ನಾಟಕ ಯುವಶಕ್ತಿ ವೇದಿಕೆ ನೇತೃತ್ವದಲ್ಲಿ ರೈತರು ಘಾಟಿ ಸುಬ್ರಹ್ಮಣ್ಯ  ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ.ದಿನೇಶ್ ಅವರಿಗೆ ಮನವಿ ಮಾಡಿದ್ದಾರೆ.

ಈ ರೈತ ಮುಖಂಡರು ಮಾತನಾಡಿ, ತಾಲೂಕಿನ ಘಾಟಿ ಕ್ಷೇತ್ರದಲ್ಲಿ ನಡೆಯುವ ಅಂತಾರಾಜ್ಯ ಭಾರೀ ದನಗಳ ಜಾತ್ರೆ ಕರ್ನಾಟಕದ ಪ್ರಮುಖ ಪಶುಜಾತ್ರೆಗಳಲ್ಲಿ ಒಂದಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ವಿಭಿನ್ನ ಭಾಗಗಳಿಂದ ಹಾಗೂ ನೆರೆ ರಾಜ್ಯಗಳಿಂದ ಸಾಕಾಣಿಕೆದಾರರು ತಮ್ಮ ದನಗಳನ್ನು ವಾಹನಗಳಲ್ಲಿ ಸಾಗಿಸಿ ಭಾಗವಹಿಸುತ್ತಾರೆ. ರೈತರಿಗೆ ಸುಂಕ ವಿನಾಯಿತಿ ನೀಡುವಂತೆ ಈ ಹಿಂದೆಯೂ ಕೂಡ ಮನವಿ ಸಲ್ಲಿಸಲಾಗಿತ್ತು, ಜಾತ್ರೆಯಲ್ಲಿ ಅದನ್ನು ಪ್ರಾಧಿಕಾರವು ಪರಿಗಣಿಸಿ ವಾಹನ ಸುಂಕ ವಿನಾಯಿತಿ ನೀಡಿತ್ತು. ಈ ಕ್ರಮದಿಂದ ಸಾಕಾಣಿಕಾರರು ಹಾಗೂ ದನ ವ್ಯಾಪಾರಿಗಳು ಬಹಳ ಉಪಯೋಗ ಪಡೆದುಕೊಂಡಿದ್ದರು. ಈ ವರ್ಷವೂ ಅದೇ ರೀತಿಯಾಗಿ, ಜಾತ್ರೆ ಅವಧಿಯಲ್ಲಿ ರಾಸುಗಳನ್ನು ಸಾಗಿಸುವ ವಾಹನಗಳಿಗೆ ವಾಹನ ಸುಂಕ ವಿನಾಯಿತಿ ನೀಡಬೇಕಿದೆ. ಇದು ಸಾಕಾಣಿಕೆದಾರರ ಹಿತಾಸಕ್ತಿಗೆ ಪೂರಕವಾಗಿದ್ದು, ಘಾಟಿ ಸುಬ್ರಹ್ಮಣ್ಯ ಅಂತಾರಾಜ್ಯ ಭಾರಿ ದನಗಳ ಜಾತ್ರೆಯ ಯಶಸ್ವಿ ಆಯೋಜನೆಗೆ ಸಹಕಾರಿಯಾಗಲಿದೆ. ಪ್ರಾಧಿಕಾರದಿಂದ ರೈತರಿಗೆ ಮೂಲ ಸೌಕರ್ಯಗಳನ್ನು ನೀಡುತ್ತಿರುವುದು ಸ್ವಾಗತಾರ್ಹ. ಅಂತೆಯೇ ರಾಸುಗಳ ಸೇರುವ ಜಾಗದಲ್ಲಿ ತೋಟಗಳ ಮಾಲೀಕರು ಕಾಂಪೌಂಡ್ಗಳನ್ನು ಹಾಕಿಕೊಂಡಿದ್ದು, ಅವರಿಗೆ ಮನವಿ ಮಾಡಿ ತೆರವು ಮಾಡಿಕೊಟ್ಟು, ವ್ಯಾಪಾರಕ್ಕೆ ಅನುಕೂಲ ಕಲ್ಪಿಸಬೇಕಿದೆ. ರಾತ್ರಿ ಸಮಯದಲ್ಲಿ ಇಲ್ಲಿ ತಂಗುವ ರೈತರಿಗೆ ಊಟದ ವ್ಯವಸ್ಥೆ ಮಾಡಬೇಕಿದೆ. ರೈತರಿಗೆ ವಿಶ್ರಾಂತಿ ಕೊಠಡಿಗಳನ್ನು ನೀಡಿದರೆ ಹೆಚ್ಚಿನ ಅನುಕೂಲವಾಗಲಿದೆ ಎಂದು  ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಘಾಟಿ ಸುಬ್ರಹ್ಮಣ್ಯ  ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ.ದಿನೇಶ್, ರೈತರು ತರುವ ರಾಸುಗಳಿಗೆ ಹಿಂದೆ ಸುಂಕ ವಿನಾಯಿತಿ ನೀಡಲಾಗಿದ್ದು, ಈ ಬಾರಿಯೂ ಪರಿಶೀಲಿಸಲಾಗುವುದು. ರೈತರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ವೇಳೆ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಹನುಮೇಗೌಡ, ಕಾರ್ಯದರ್ಶಿ ಸತೀಶ್, ಹೋಬಳಿ ಅಧ್ಯಕ್ಷರು ಮುನಿ ರಾಮೇಗೌಡ, ಮುಖಂಡರಾದ   ವಾಸುದೇವ್ , ಮೂರ್ತಿ, ಮುರಳಿ ಹನುಮಂತರಾಯಪ್ಪ, ತಿಪ್ಪೂರು ತಿಮ್ಮಣ್ಣ ಮೊದಲಾದವರು ಹಾಜರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

7 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

14 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

15 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago