ದೊಡ್ಡಬಳ್ಳಾಪುರ: ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಮುಖ್ಯ ರಸ್ತೆಯ ಹಾಡೋನಹಳ್ಳಿ ಗ್ರಾಮದಲ್ಲಿ ಎಂ.ಎಸ್.ಐ.ಎಲ್. ವತಿಯಿಂದ ಮದ್ಯದ ಅಂಗಡಿ ತರೆಯಲು ಅನುಮತಿ ನೀಡಲು ಮುಂದಾಗಿರುವ ಅಬಕಾರಿ ಇಲಾಖೆಯ ಕ್ರಮಕ್ಕೆ ಸ್ಥಳೀಯ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ತಾಲ್ಲೂಕಿನಲ್ಲೇ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬರುವ ಘಾಟಿ ಕ್ಷೇತ್ರದ ರಸ್ತೆಯಲ್ಲೇ ಇರುವ ಹಾಡೋನಹಳ್ಳಿ ಗ್ರಾಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ತರಬೇತಿ ಕೇಂದ್ರವು ಇದೆ. ಇಲ್ಲಿನ ತರಬೇತಿ ಕೇಂದ್ರಕ್ಕೆ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದಲು ರೈತರು ವಿವಿಧ ಆಧುನಿಕ ಕೃಷಿ ಪದ್ದತಿಗಳ ಹಾಗೂ ಸರ್ಕಾರದ ಯೋಜನೆಗಳ ಕುರಿತಂತೆ ತರಬೇತಿಗಳನ್ನು ಪಡೆಯಲು ಪುರುಷರು, ಮಹಿಳೆಯರು ಬರುತ್ತಾರೆ.
ಇಂತಹ ಪ್ರಮುಖ ಗ್ರಾಮದಲ್ಲಿ ಮದ್ಯದ ಅಂಗಡಿಯನ್ನು ತರೆಯಲು ಮುಂದಾಗಿರುವ ಕ್ರಮ ಖಂಡನೀಯ ಎಂದು ತಿಳಿಸಿರುವ ಹಾಡೋನಹಳ್ಳಿ ಗ್ರಾಮದ ಮುಖಂಡ ಎಂ.ಮುನೇಗೌಡ, ಈ ಬಗ್ಗೆ ಹಲವಾರು ಬಾರಿ ಗ್ರಾಮಸ್ಥರು ಲಿಖಿತವಾಗಿ ಮನವಿಗಳನ್ನು ನೀಡಿದ್ದರು ಸಹ ಅಬಕಾರಿ ಇಲಾಖೆ ಅಧಿಕಾರಿಗಳು ಲಾಭಿಗೆ ಮಣಿದು ಗಮನವಹಿಸದೇ ಮದ್ಯದ ಅಂಗಡಿ ತೆರಯಲು ಅನುಮತಿ ನೀಡಲು ಮುಂದಾದರೆ ಅಧಿಕಾರಿಗಳ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…