ಘಾಟಿ ರಸ್ತೆಯಲ್ಲಿ ಮದ್ಯದ ಅಂಗಡಿಗೆ ಸ್ಥಳೀಯರಿಂದ ತೀವ್ರ ವಿರೋಧ

ದೊಡ್ಡಬಳ್ಳಾಪುರ: ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಮುಖ್ಯ ರಸ್ತೆಯ ಹಾಡೋನಹಳ್ಳಿ ಗ್ರಾಮದಲ್ಲಿ ಎಂ.ಎಸ್.ಐ.ಎಲ್. ವತಿಯಿಂದ ಮದ್ಯದ ಅಂಗಡಿ ತರೆಯಲು ಅನುಮತಿ ನೀಡಲು ಮುಂದಾಗಿರುವ ಅಬಕಾರಿ ಇಲಾಖೆಯ ಕ್ರಮಕ್ಕೆ ಸ್ಥಳೀಯ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ತಾಲ್ಲೂಕಿನಲ್ಲೇ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬರುವ ಘಾಟಿ ಕ್ಷೇತ್ರದ ರಸ್ತೆಯಲ್ಲೇ ಇರುವ ಹಾಡೋನಹಳ್ಳಿ ಗ್ರಾಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ತರಬೇತಿ ಕೇಂದ್ರವು ಇದೆ. ಇಲ್ಲಿನ ತರಬೇತಿ ಕೇಂದ್ರಕ್ಕೆ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದಲು ರೈತರು ವಿವಿಧ ಆಧುನಿಕ ಕೃಷಿ ಪದ್ದತಿಗಳ ಹಾಗೂ ಸರ್ಕಾರದ ಯೋಜನೆಗಳ ಕುರಿತಂತೆ ತರಬೇತಿಗಳನ್ನು ಪಡೆಯಲು ಪುರುಷರು, ಮಹಿಳೆಯರು ಬರುತ್ತಾರೆ.

ಇಂತಹ ಪ್ರಮುಖ ಗ್ರಾಮದಲ್ಲಿ ಮದ್ಯದ ಅಂಗಡಿಯನ್ನು ತರೆಯಲು ಮುಂದಾಗಿರುವ ಕ್ರಮ ಖಂಡನೀಯ ಎಂದು ತಿಳಿಸಿರುವ ಹಾಡೋನಹಳ್ಳಿ ಗ್ರಾಮದ ಮುಖಂಡ ಎಂ.ಮುನೇಗೌಡ, ಈ ಬಗ್ಗೆ ಹಲವಾರು ಬಾರಿ ಗ್ರಾಮಸ್ಥರು ಲಿಖಿತವಾಗಿ ಮನವಿಗಳನ್ನು ನೀಡಿದ್ದರು ಸಹ ಅಬಕಾರಿ ಇಲಾಖೆ ಅಧಿಕಾರಿಗಳು ಲಾಭಿಗೆ ಮಣಿದು ಗಮನವಹಿಸದೇ ಮದ್ಯದ ಅಂಗಡಿ ತೆರಯಲು ಅನುಮತಿ ನೀಡಲು ಮುಂದಾದರೆ ಅಧಿಕಾರಿಗಳ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

3 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

7 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

11 hours ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

1 day ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

1 day ago