ದೊಡ್ಡಬಳ್ಳಾಪುರ: ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಮುಖ್ಯ ರಸ್ತೆಯ ಹಾಡೋನಹಳ್ಳಿ ಗ್ರಾಮದಲ್ಲಿ ಎಂ.ಎಸ್.ಐ.ಎಲ್. ವತಿಯಿಂದ ಮದ್ಯದ ಅಂಗಡಿ ತರೆಯಲು ಅನುಮತಿ ನೀಡಲು ಮುಂದಾಗಿರುವ ಅಬಕಾರಿ ಇಲಾಖೆಯ ಕ್ರಮಕ್ಕೆ ಸ್ಥಳೀಯ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ತಾಲ್ಲೂಕಿನಲ್ಲೇ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬರುವ ಘಾಟಿ ಕ್ಷೇತ್ರದ ರಸ್ತೆಯಲ್ಲೇ ಇರುವ ಹಾಡೋನಹಳ್ಳಿ ಗ್ರಾಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ತರಬೇತಿ ಕೇಂದ್ರವು ಇದೆ. ಇಲ್ಲಿನ ತರಬೇತಿ ಕೇಂದ್ರಕ್ಕೆ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದಲು ರೈತರು ವಿವಿಧ ಆಧುನಿಕ ಕೃಷಿ ಪದ್ದತಿಗಳ ಹಾಗೂ ಸರ್ಕಾರದ ಯೋಜನೆಗಳ ಕುರಿತಂತೆ ತರಬೇತಿಗಳನ್ನು ಪಡೆಯಲು ಪುರುಷರು, ಮಹಿಳೆಯರು ಬರುತ್ತಾರೆ.
ಇಂತಹ ಪ್ರಮುಖ ಗ್ರಾಮದಲ್ಲಿ ಮದ್ಯದ ಅಂಗಡಿಯನ್ನು ತರೆಯಲು ಮುಂದಾಗಿರುವ ಕ್ರಮ ಖಂಡನೀಯ ಎಂದು ತಿಳಿಸಿರುವ ಹಾಡೋನಹಳ್ಳಿ ಗ್ರಾಮದ ಮುಖಂಡ ಎಂ.ಮುನೇಗೌಡ, ಈ ಬಗ್ಗೆ ಹಲವಾರು ಬಾರಿ ಗ್ರಾಮಸ್ಥರು ಲಿಖಿತವಾಗಿ ಮನವಿಗಳನ್ನು ನೀಡಿದ್ದರು ಸಹ ಅಬಕಾರಿ ಇಲಾಖೆ ಅಧಿಕಾರಿಗಳು ಲಾಭಿಗೆ ಮಣಿದು ಗಮನವಹಿಸದೇ ಮದ್ಯದ ಅಂಗಡಿ ತೆರಯಲು ಅನುಮತಿ ನೀಡಲು ಮುಂದಾದರೆ ಅಧಿಕಾರಿಗಳ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…