ದೊಡ್ಡಬಳ್ಳಾಪುರ: ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಮುಖ್ಯ ರಸ್ತೆಯ ಹಾಡೋನಹಳ್ಳಿ ಗ್ರಾಮದಲ್ಲಿ ಎಂ.ಎಸ್.ಐ.ಎಲ್. ವತಿಯಿಂದ ಮದ್ಯದ ಅಂಗಡಿ ತರೆಯಲು ಅನುಮತಿ ನೀಡಲು ಮುಂದಾಗಿರುವ ಅಬಕಾರಿ ಇಲಾಖೆಯ ಕ್ರಮಕ್ಕೆ ಸ್ಥಳೀಯ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ತಾಲ್ಲೂಕಿನಲ್ಲೇ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬರುವ ಘಾಟಿ ಕ್ಷೇತ್ರದ ರಸ್ತೆಯಲ್ಲೇ ಇರುವ ಹಾಡೋನಹಳ್ಳಿ ಗ್ರಾಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ತರಬೇತಿ ಕೇಂದ್ರವು ಇದೆ. ಇಲ್ಲಿನ ತರಬೇತಿ ಕೇಂದ್ರಕ್ಕೆ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದಲು ರೈತರು ವಿವಿಧ ಆಧುನಿಕ ಕೃಷಿ ಪದ್ದತಿಗಳ ಹಾಗೂ ಸರ್ಕಾರದ ಯೋಜನೆಗಳ ಕುರಿತಂತೆ ತರಬೇತಿಗಳನ್ನು ಪಡೆಯಲು ಪುರುಷರು, ಮಹಿಳೆಯರು ಬರುತ್ತಾರೆ.
ಇಂತಹ ಪ್ರಮುಖ ಗ್ರಾಮದಲ್ಲಿ ಮದ್ಯದ ಅಂಗಡಿಯನ್ನು ತರೆಯಲು ಮುಂದಾಗಿರುವ ಕ್ರಮ ಖಂಡನೀಯ ಎಂದು ತಿಳಿಸಿರುವ ಹಾಡೋನಹಳ್ಳಿ ಗ್ರಾಮದ ಮುಖಂಡ ಎಂ.ಮುನೇಗೌಡ, ಈ ಬಗ್ಗೆ ಹಲವಾರು ಬಾರಿ ಗ್ರಾಮಸ್ಥರು ಲಿಖಿತವಾಗಿ ಮನವಿಗಳನ್ನು ನೀಡಿದ್ದರು ಸಹ ಅಬಕಾರಿ ಇಲಾಖೆ ಅಧಿಕಾರಿಗಳು ಲಾಭಿಗೆ ಮಣಿದು ಗಮನವಹಿಸದೇ ಮದ್ಯದ ಅಂಗಡಿ ತೆರಯಲು ಅನುಮತಿ ನೀಡಲು ಮುಂದಾದರೆ ಅಧಿಕಾರಿಗಳ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…