ದೊಡ್ಡಬಳ್ಳಾಪುರ: ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಮುಖ್ಯ ರಸ್ತೆಯ ಹಾಡೋನಹಳ್ಳಿ ಗ್ರಾಮದಲ್ಲಿ ಎಂ.ಎಸ್.ಐ.ಎಲ್. ವತಿಯಿಂದ ಮದ್ಯದ ಅಂಗಡಿ ತರೆಯಲು ಅನುಮತಿ ನೀಡಲು ಮುಂದಾಗಿರುವ ಅಬಕಾರಿ ಇಲಾಖೆಯ ಕ್ರಮಕ್ಕೆ ಸ್ಥಳೀಯ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ತಾಲ್ಲೂಕಿನಲ್ಲೇ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬರುವ ಘಾಟಿ ಕ್ಷೇತ್ರದ ರಸ್ತೆಯಲ್ಲೇ ಇರುವ ಹಾಡೋನಹಳ್ಳಿ ಗ್ರಾಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ತರಬೇತಿ ಕೇಂದ್ರವು ಇದೆ. ಇಲ್ಲಿನ ತರಬೇತಿ ಕೇಂದ್ರಕ್ಕೆ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದಲು ರೈತರು ವಿವಿಧ ಆಧುನಿಕ ಕೃಷಿ ಪದ್ದತಿಗಳ ಹಾಗೂ ಸರ್ಕಾರದ ಯೋಜನೆಗಳ ಕುರಿತಂತೆ ತರಬೇತಿಗಳನ್ನು ಪಡೆಯಲು ಪುರುಷರು, ಮಹಿಳೆಯರು ಬರುತ್ತಾರೆ.
ಇಂತಹ ಪ್ರಮುಖ ಗ್ರಾಮದಲ್ಲಿ ಮದ್ಯದ ಅಂಗಡಿಯನ್ನು ತರೆಯಲು ಮುಂದಾಗಿರುವ ಕ್ರಮ ಖಂಡನೀಯ ಎಂದು ತಿಳಿಸಿರುವ ಹಾಡೋನಹಳ್ಳಿ ಗ್ರಾಮದ ಮುಖಂಡ ಎಂ.ಮುನೇಗೌಡ, ಈ ಬಗ್ಗೆ ಹಲವಾರು ಬಾರಿ ಗ್ರಾಮಸ್ಥರು ಲಿಖಿತವಾಗಿ ಮನವಿಗಳನ್ನು ನೀಡಿದ್ದರು ಸಹ ಅಬಕಾರಿ ಇಲಾಖೆ ಅಧಿಕಾರಿಗಳು ಲಾಭಿಗೆ ಮಣಿದು ಗಮನವಹಿಸದೇ ಮದ್ಯದ ಅಂಗಡಿ ತೆರಯಲು ಅನುಮತಿ ನೀಡಲು ಮುಂದಾದರೆ ಅಧಿಕಾರಿಗಳ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…