ಘಾಟಿ ಸಮೀಪ ಮದುವೆ ಬಸ್ ಮೇಲೆ ಕಲ್ಲು ತೂರಿ ದರೋಡೆಗೆ ಯತ್ನ ಆರೋಪ: ಕಳ್ಳರ ಕಲ್ಲು ಎಸತಕ್ಕೆ 10 ವರ್ಷದ ಪುಟ್ಟ ಬಾಲಕಿ ತಲೆಗೆ ಗಂಭೀರ ಗಾಯ: ಬಾಲಕಿಯ ಪರಿಸ್ಥಿತಿ ನೋಡಿದ್ರೆ ಹೃದಯ ಝಲ್ ಅನಿಸುತ್ತೆ!

ಖದೀಮರ ಗ್ಯಾಂಗ್ ರಾತ್ರಿ ವೇಳೆ ಮದುವೆ ಬಸ್ ಮೇಲೆ ಕಲ್ಲು ತೂರಿರುವ ಘಟನೆ ಫೆ.21 ರ ಶನಿವಾರ ರಾತ್ರಿ 11 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮೀಪದ ಪಾಲ್ ಪಾಲ್ ದಿನ್ನೆ ಕೆರೆ ಬಳಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ…

ಕಳ್ಳರ ಕಲ್ಲು ಎಸತಕ್ಕೆ 10 ವರ್ಷದ ಪುಟ್ಟ ಬಾಲಕಿ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ..

ಫೆ.21 ರ ಶನಿವಾರ ರಾತ್ರಿ ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಘಾಟಿಯ ಛತ್ರದಲ್ಲಿ ಮದುವೆ ನಡೆಯುತ್ತಿತ್ತು.. ಮದುವೆ ಆರತಕ್ಷತೆ ಮುಗಿಸಿ ವಾಪಾಸ್ ಬೆಂಗಳೂರಿನ ಜೆಸಿನಗರ ವ್ಯಾಪ್ತಿಯ ಮುನಿರೆಡ್ಡಿಪಾಳ್ಯಕ್ಕೆ ತೆರಳುತ್ತಿದ್ದ ವೇಳೆ ಬಸ್ ಮೇಲೆ ಖದೀಮರು ಕಲ್ಲು ತೂರಾಟ ಮಾಡಿದ್ದಾರೆ..

ಮನೆಗೆ ಹೊದಿಸುವ ಹಂಚನ್ನ ಶಾರ್ಪ್ ಮಾಡಿ ಮನಸೋ ಇಚ್ಛೆ ಬಸ್ ಮೇಲೆ ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಕಿಟಕಿ ಬಳಿ ಕುಳಿತಿದ್ದ ಪುಟ್ಟ ಬಾಲಕಿ ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದೆ. ತೀವ್ರವಾದ ಗಾಯವಾಗಿ ಆಸ್ಪತ್ರೆ ಪಾಲಾಗಿದ್ದಾರೆ..

ಬಸ್ ಮೇಲೆ ಕಲ್ಲು ಎಸೆದರೂ ಡ್ರೈವರ್ ನ ಜಾಗರೂಕತೆಯಿಂದ ದೊಡ್ಡ ಮಟ್ಟದ ಅಪಾಯ ತಪ್ಪಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….

Ramesh Babu

Journalist

Recent Posts

ಮಾಸ್ಕ್ ರಾಬರಿ ಗ್ಯಾಂಗ್ ಫುಲ್ ಆ್ಯಕ್ಟೀವ್: ಒಂದೇ ದಿನ ಮೂರು ಮನೆಗಳಲ್ಲಿ ಕಳ್ಳತನ

ದೇವನಹಳ್ಳಿ ಹೊರ ವಲಯದಲ್ಲಿ ಮಾಸ್ಕ್ ರಾಬರಿ ಗ್ಯಾಂಗ್ ಫುಲ್ ಆ್ಯಕ್ಟೀವ್ ಆಗಿದೆ.. ಆವತಿ ಗ್ರಾಮದಲ್ಲಿ ಒಂದೇ ದಿನ ಮೂರು ಮನೆಗಳಲ್ಲಿ…

59 minutes ago

ಯುಗಾದಿ ಹಬ್ಬದ ಸಂದರ್ಭದಲ್ಲಿ ಗ್ರಾಮದಲ್ಲಿ ಬೈಕ್ ವೀಲಿಂಗ್ ವಿಚಾರ: ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ: ದೊಣ್ಣೆ ಹಿಡಿದು ಬಡಿದಾಡಿಕೊಂಡ ಯುವಕರ ಗುಂಪು

ಯುಗಾದಿ ಹಬ್ಬದ ಸಂದರ್ಭದಲ್ಲಿ ನಶೆಯಲ್ಲಿ ವೀಲಿಂಗ್ ಮಾಡುತ್ತಿರುವಾಗ ಗ್ರಾಮದವರು ಪ್ನಶ್ನೆ ಮಾಡಿದ್ದಕ್ಕೆ  ಯುವಕರು ದೊಣ್ಣೆ ಹಿಡಿದು ಹಲ್ಲೆ ಮಾಡಿರುವ ಘಟನೆ…

1 hour ago

ಉಪಚುನಾವಣೆ, ಪ್ರಚಾರ ಮತ್ತು ಅದಕ್ಕಾಗಿ ಪಡುತ್ತಿರುವ ಶ್ರಮ……

ಹಾಲಿ ಶಾಸಕರ ನಿಧನದಿಂದಾಗಿ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿದೆ. ಈಗ ನಾವು ಅವರ ಕುಟುಂಬಗಳ ನಿರ್ವಹಣೆಗಾಗಿ,…

9 hours ago

ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು…

20 hours ago

ಮಾ.21, 22ರಂದು ಹಾದ್ರೀಪುರ ‌ಕ್ರಿಕೆಟ್ ಟೂರ್ನಮೆಂಟ್

ಮಾ.21, 22ರಂದು ದೊಡ್ಡಬಳ್ಳಾಪುರದ‌ ಹಾದ್ರೀಪುರ ಗ್ರಾಮದಲ್ಲಿ‌ ಎರಡನೇ‌ ವರ್ಷದ ಹಾದ್ರೀಪುರ ‌ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿದೆ... ಜೈ ಆಂಜನೇಯ, ರಾಕ್…

21 hours ago

ಎಲ್‌ಪಿಜಿ ಸಿಲಿಂಡರ್ ಗಾಗಿ ಮುಗಿಬಿದ್ದ ಜನ

ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಕ್ಕಟ್ಟು ಭಾರತಕ್ಕೂ ತಟ್ಟಿರುವ ಹಿನ್ನೆಲೆ ದೇಶಾದ್ಯಂತ ಅಡುಗೆ ಅನಿಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಪ್ರಸ್ತುತ…

1 day ago