ಖದೀಮರ ಗ್ಯಾಂಗ್ ರಾತ್ರಿ ವೇಳೆ ಮದುವೆ ಬಸ್ ಮೇಲೆ ಕಲ್ಲು ತೂರಿರುವ ಘಟನೆ ಫೆ.21 ರ ಶನಿವಾರ ರಾತ್ರಿ 11 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮೀಪದ ಪಾಲ್ ಪಾಲ್ ದಿನ್ನೆ ಕೆರೆ ಬಳಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ…
ಕಳ್ಳರ ಕಲ್ಲು ಎಸತಕ್ಕೆ 10 ವರ್ಷದ ಪುಟ್ಟ ಬಾಲಕಿ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ..
ಫೆ.21 ರ ಶನಿವಾರ ರಾತ್ರಿ ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಘಾಟಿಯ ಛತ್ರದಲ್ಲಿ ಮದುವೆ ನಡೆಯುತ್ತಿತ್ತು.. ಮದುವೆ ಆರತಕ್ಷತೆ ಮುಗಿಸಿ ವಾಪಾಸ್ ಬೆಂಗಳೂರಿನ ಜೆಸಿನಗರ ವ್ಯಾಪ್ತಿಯ ಮುನಿರೆಡ್ಡಿಪಾಳ್ಯಕ್ಕೆ ತೆರಳುತ್ತಿದ್ದ ವೇಳೆ ಬಸ್ ಮೇಲೆ ಖದೀಮರು ಕಲ್ಲು ತೂರಾಟ ಮಾಡಿದ್ದಾರೆ..
ಮನೆಗೆ ಹೊದಿಸುವ ಹಂಚನ್ನ ಶಾರ್ಪ್ ಮಾಡಿ ಮನಸೋ ಇಚ್ಛೆ ಬಸ್ ಮೇಲೆ ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಕಿಟಕಿ ಬಳಿ ಕುಳಿತಿದ್ದ ಪುಟ್ಟ ಬಾಲಕಿ ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದೆ. ತೀವ್ರವಾದ ಗಾಯವಾಗಿ ಆಸ್ಪತ್ರೆ ಪಾಲಾಗಿದ್ದಾರೆ..
ಬಸ್ ಮೇಲೆ ಕಲ್ಲು ಎಸೆದರೂ ಡ್ರೈವರ್ ನ ಜಾಗರೂಕತೆಯಿಂದ ದೊಡ್ಡ ಮಟ್ಟದ ಅಪಾಯ ತಪ್ಪಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…