ಘಾಟಿ ಸಮೀಪ ಮದುವೆ ಬಸ್ ಮೇಲೆ ಕಲ್ಲು ತೂರಿ ದರೋಡೆಗೆ ಯತ್ನ ಆರೋಪ: ಕಳ್ಳರ ಕಲ್ಲು ಎಸತಕ್ಕೆ 10 ವರ್ಷದ ಪುಟ್ಟ ಬಾಲಕಿ ತಲೆಗೆ ಗಂಭೀರ ಗಾಯ: ಬಾಲಕಿಯ ಪರಿಸ್ಥಿತಿ ನೋಡಿದ್ರೆ ಹೃದಯ ಝಲ್ ಅನಿಸುತ್ತೆ!

ಖದೀಮರ ಗ್ಯಾಂಗ್ ರಾತ್ರಿ ವೇಳೆ ಮದುವೆ ಬಸ್ ಮೇಲೆ ಕಲ್ಲು ತೂರಿರುವ ಘಟನೆ ಫೆ.21 ರ ಶನಿವಾರ ರಾತ್ರಿ 11 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮೀಪದ ಪಾಲ್ ಪಾಲ್ ದಿನ್ನೆ ಕೆರೆ ಬಳಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ…

ಕಳ್ಳರ ಕಲ್ಲು ಎಸತಕ್ಕೆ 10 ವರ್ಷದ ಪುಟ್ಟ ಬಾಲಕಿ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ..

ಫೆ.21 ರ ಶನಿವಾರ ರಾತ್ರಿ ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಘಾಟಿಯ ಛತ್ರದಲ್ಲಿ ಮದುವೆ ನಡೆಯುತ್ತಿತ್ತು.. ಮದುವೆ ಆರತಕ್ಷತೆ ಮುಗಿಸಿ ವಾಪಾಸ್ ಬೆಂಗಳೂರಿನ ಜೆಸಿನಗರ ವ್ಯಾಪ್ತಿಯ ಮುನಿರೆಡ್ಡಿಪಾಳ್ಯಕ್ಕೆ ತೆರಳುತ್ತಿದ್ದ ವೇಳೆ ಬಸ್ ಮೇಲೆ ಖದೀಮರು ಕಲ್ಲು ತೂರಾಟ ಮಾಡಿದ್ದಾರೆ..

ಮನೆಗೆ ಹೊದಿಸುವ ಹಂಚನ್ನ ಶಾರ್ಪ್ ಮಾಡಿ ಮನಸೋ ಇಚ್ಛೆ ಬಸ್ ಮೇಲೆ ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಕಿಟಕಿ ಬಳಿ ಕುಳಿತಿದ್ದ ಪುಟ್ಟ ಬಾಲಕಿ ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದೆ. ತೀವ್ರವಾದ ಗಾಯವಾಗಿ ಆಸ್ಪತ್ರೆ ಪಾಲಾಗಿದ್ದಾರೆ..

ಬಸ್ ಮೇಲೆ ಕಲ್ಲು ಎಸೆದರೂ ಡ್ರೈವರ್ ನ ಜಾಗರೂಕತೆಯಿಂದ ದೊಡ್ಡ ಮಟ್ಟದ ಅಪಾಯ ತಪ್ಪಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….

Ramesh Babu

Journalist

Recent Posts

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

56 minutes ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

7 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

18 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

22 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

23 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

1 day ago