ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಮತ್ತು ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರವನ್ನ ರಚನೆ ಮಾಡಿದ್ದು, ಈ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ 5 ನಾಮನಿರ್ದೇಶಕರನ್ನ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಪ್ರಾಧಿಕಾರದ ಮೊದಲ ನಾಮನಿರ್ದೇಶಕರಾಗಿ ಜಿ.ಎನ್.ರಂಗಪ್ಪ, ರವಿ.ಕೆ.ಎಸ್, ಲಕ್ಷ್ಮನಾಯಕ, ಆರ್.ವಿ.ಮಹೇಶ್ ಕುಮಾರ್, ಹೇಮಲಾತ.ಎಂ ರವರನ್ನ ನೇಮಕ ಮಾಡಿ ಕರ್ನಾಟಕ ರಾಜ್ಯಪಾಲರ ಆದೇಶಾನುಸರ ಕಂದಾಯ ಇಲಾಖೆ( ಧಾರ್ಮಿಕ ದತ್ತಿ) ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಪಿ.ಹನುಂತರಾಜು ಆದೇಶಸಿದ್ದಾರೆ.
ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸದಸ್ಯರಾದ 5 ಮಂದಿ ಘಾಟಿ ಸನ್ನಿಧಾನದಲ್ಲಿ ಪದಗ್ರಹಣ ನಡೆಸಿದರು, ನೂತನ ಸದಸ್ಯರಿಗೆ ಮುಖಂಡರು ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಅಭಿನಂದನೆ ಸಲ್ಲಿಸಿದರು.
ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಚುಂಚೇಗೌಡ, ಸದಸ್ಯರಾದ ಅಪ್ಪಿ ವೆಂಕಟೇಶ್, ಕಾಂಗ್ರೆಸ್ ಮುಖಂಡರಾದ ರಾಜಘಟ್ಟ ನಾರಾಯಣಸ್ವಾಮಿ, ಗಂಗಸಂದ್ರ ಶೀಧರ್, ಕಾಂತರಾಜು, ಗೋಪಾಲ ನಾಯಕ್, ವಕೀಲರಾದ ಆರ್.ವಿ.ಮನುಕುಮಾರ್ ಸೇರಿದಂತೆ ಇತರರು ಇದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…