ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಮತ್ತು ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರವನ್ನ ರಚನೆ ಮಾಡಿದ್ದು, ಈ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ 5 ನಾಮನಿರ್ದೇಶಕರನ್ನ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಪ್ರಾಧಿಕಾರದ ಮೊದಲ ನಾಮನಿರ್ದೇಶಕರಾಗಿ ಜಿ.ಎನ್.ರಂಗಪ್ಪ, ರವಿ.ಕೆ.ಎಸ್, ಲಕ್ಷ್ಮನಾಯಕ, ಆರ್.ವಿ.ಮಹೇಶ್ ಕುಮಾರ್, ಹೇಮಲಾತ.ಎಂ ರವರನ್ನ ನೇಮಕ ಮಾಡಿ ಕರ್ನಾಟಕ ರಾಜ್ಯಪಾಲರ ಆದೇಶಾನುಸರ ಕಂದಾಯ ಇಲಾಖೆ( ಧಾರ್ಮಿಕ ದತ್ತಿ) ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಪಿ.ಹನುಂತರಾಜು ಆದೇಶಸಿದ್ದಾರೆ.
ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸದಸ್ಯರಾದ 5 ಮಂದಿ ಘಾಟಿ ಸನ್ನಿಧಾನದಲ್ಲಿ ಪದಗ್ರಹಣ ನಡೆಸಿದರು, ನೂತನ ಸದಸ್ಯರಿಗೆ ಮುಖಂಡರು ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಅಭಿನಂದನೆ ಸಲ್ಲಿಸಿದರು.
ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಚುಂಚೇಗೌಡ, ಸದಸ್ಯರಾದ ಅಪ್ಪಿ ವೆಂಕಟೇಶ್, ಕಾಂಗ್ರೆಸ್ ಮುಖಂಡರಾದ ರಾಜಘಟ್ಟ ನಾರಾಯಣಸ್ವಾಮಿ, ಗಂಗಸಂದ್ರ ಶೀಧರ್, ಕಾಂತರಾಜು, ಗೋಪಾಲ ನಾಯಕ್, ವಕೀಲರಾದ ಆರ್.ವಿ.ಮನುಕುಮಾರ್ ಸೇರಿದಂತೆ ಇತರರು ಇದ್ದರು.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…