ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ನಾಮನಿರ್ದೇಶಕರ ಪದಗ್ರಹಣ

ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಮತ್ತು ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರವನ್ನ ರಚನೆ ಮಾಡಿದ್ದು, ಈ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ 5 ನಾಮನಿರ್ದೇಶಕರನ್ನ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಪ್ರಾಧಿಕಾರದ ಮೊದಲ ನಾಮನಿರ್ದೇಶಕರಾಗಿ ಜಿ.ಎನ್.ರಂಗಪ್ಪ, ರವಿ.ಕೆ.ಎಸ್, ಲಕ್ಷ್ಮನಾಯಕ, ಆರ್.ವಿ.ಮಹೇಶ್ ಕುಮಾರ್, ಹೇಮಲಾತ.ಎಂ ರವರನ್ನ ನೇಮಕ ಮಾಡಿ ಕರ್ನಾಟಕ ರಾಜ್ಯಪಾಲರ ಆದೇಶಾನುಸರ ಕಂದಾಯ ಇಲಾಖೆ( ಧಾರ್ಮಿಕ ದತ್ತಿ) ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಪಿ.ಹನುಂತರಾಜು ಆದೇಶಸಿದ್ದಾರೆ.

ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸದಸ್ಯರಾದ 5 ಮಂದಿ ಘಾಟಿ ಸನ್ನಿಧಾನದಲ್ಲಿ ಪದಗ್ರಹಣ ನಡೆಸಿದರು, ನೂತನ ಸದಸ್ಯರಿಗೆ ಮುಖಂಡರು ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಅಭಿನಂದನೆ ಸಲ್ಲಿಸಿದರು.

 ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಚುಂಚೇಗೌಡ, ಸದಸ್ಯರಾದ ಅಪ್ಪಿ ವೆಂಕಟೇಶ್, ಕಾಂಗ್ರೆಸ್ ಮುಖಂಡರಾದ ರಾಜಘಟ್ಟ ನಾರಾಯಣಸ್ವಾಮಿ, ಗಂಗಸಂದ್ರ ಶೀಧರ್, ಕಾಂತರಾಜು, ಗೋಪಾಲ ನಾಯಕ್, ವಕೀಲರಾದ ಆರ್.ವಿ.ಮನುಕುಮಾರ್ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

13 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 day ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago