ಘಾಟಿ ಸುಬ್ರಹ್ಮಣ್ಯ ದೇವಾಲಯದ ಬ್ರಹ್ಮರಥೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ಲತಾ‌ ಸೂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿರುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ಡಿಸೆಂಬರ್ 24 ರಿಂದ 28 ರವರೆಗೆ ಹಾಗೂ ಸುಬ್ರಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವವು ಡಿಸೆಂಬರ್ 28 ರಂದು ನಡೆಯಲಿದ್ದು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಹೇಳಿದರು.

ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ 2022-23ನೇ ಸಾಲಿನ ಬ್ರಹ್ಮರಥೋತ್ಸವ ಪ್ರಯುಕ್ತ ಪೂರ್ವಸಿದ್ಧತೆ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಜಾನುವಾರುಗಳ ಸಂತೆ, ಜಾತ್ರೆ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಡಿಸೆಂಬರ್ 20 ರಿಂದ ಆರಂಭಗೊಳ್ಳಬೇಕಿದ್ದ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದನಗಳ ಜಾತ್ರೆಯನ್ನು ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಘಾಟಿ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಬೇಕು. ಸಾರ್ವಜನಿಕರು ಸ್ವ-ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ದೇವಾಲಯದ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆರೋಗ್ಯ ಶಿಬಿರ ಹಾಗೂ ಪ್ರಥಮ ಚಿಕಿತ್ಸಾ ಕ್ರಮಗಳ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ನೆರೆ ರಾಜ್ಯಗಳು ಹಾಗೂ ವಿವಿಧ ಜಿಲ್ಲೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ದರ್ಶನ ವ್ಯವಸ್ಥೆ, ಪ್ರಸಾದ, ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್ ವ್ಯವಸ್ಥೆ, ಸಾರಿಗೆ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡುವಂತೆ ಹಾಗೂ ಸುಗಮ ಸಂಗೀತ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಂಚಾರ ದಟ್ಟಣೆ ಉಂಟಾಗದಂತೆ ತಡೆಯಲು ಹಾಗೂ ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡುವಂತೆ ಪೋಲಿಸ್ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಸರ್ಕಾರಿ ಯೋಜನೆಗಳ ಮಾಹಿತಿಯುಳ್ಳ ವಿವಿಧ ಇಲಾಖೆಗಳ ವಸ್ತುಪ್ರದರ್ಶನ ಹಾಗೂ ಸ್ವ-ಸಹಾಯ ಗುಂಪುಗಳು ಉತ್ಪಾದಿಸಿದ ಉತ್ಪನ್ನಗಳ ಮಾರಾಟ ಮಳಿಗೆ ತೆರೆಯುವಂತೆ ತಿಳಿಸಿದರು ಹಾಗೂ ಯಾವುದೇ ಲೋಪವಾಗದಂತೆ ಬ್ರಹ್ಮರಥೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ನಿರ್ದೇಶಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು ಹಾಗೂ ಘಾಟಿ ದೇವಾಲಯದ ಕಾರ್ಯ ನಿರ್ವಹಣಾ ಅಧಿಕಾರಿ ಹೇಮಾವತಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

5 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

6 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

21 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago