ಶ್ರೀ ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ದೊಡ್ಡಬಳ್ಳಾಪುರ ತಾಲ್ಲೂಕು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ 2023-24ನೇ ಸಾಲಿನ ಬ್ರಹ್ಮರಥೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಥೋತ್ಸವದಲ್ಲಿ ಹೆಚ್ಚಿನ ಪ್ರಮಾಣದ ಜನರು ಭಾಗವಹಿಸುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು, ಆಂಬ್ಯುಲೆನ್ಸ್ ವ್ಯವಸ್ಥೆ ಜೊತೆಗೆ ವೈದ್ಯಾಧಿಕಾರಿಗಳು ಸಕ್ರಿಯವಾಗಿರಲು ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು. ವಿದ್ಯುತ್ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಲು ಬೆಸ್ಕಾಂ ಸಿಬ್ಬಂದಿಗೆ ತಿಳಿಸಿದರು.
ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗದಂತೆ ಎಚ್ಚರ ವಹಿಸಿ ಎಂದರು. ವಾಹನ ದಟ್ಟಣೆ ಉಂಟಾಗದಂತೆ ಪಾರ್ಕಿಂಗ್ ವ್ಯವಸ್ಥೆ, ಬಸ್ ಗಳ ವ್ಯವಸ್ಥೆ, ಪೊಲೀಸ್ ಸಿಬ್ಬಂದಿಯನ್ನ ನೇಮಿಸಲು ತಿಳಿಸಿದರು.
ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಿ, ಸ್ವಚ್ಛತೆ ಕಾಪಾಡಲು ತಿಳಿಸಿದರು. ಸ್ವಸಹಾಯ ಗುಂಪುಗಳ ಮಳಿಗೆಗಳಿಗೆ ವ್ಯವಸ್ಥೆ ಕಲ್ಪಿಸಲು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಹೆಚ್ ಅಮರೇಶ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ದೊಡ್ಡಬಳ್ಳಾಪುರ ತಾಲ್ಲೂಕು ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್, ಧಾರ್ಮಿಕ ದತ್ತಿ ತಹಸೀಲ್ದಾರ್ ಜಿ ಜೆ ಹೇಮಾವತಿ, ದೊಡ್ಡಬಳ್ಳಾಪುರ ಸರ್ಕಲ್ ಇನ್ಸ್ ಪೆಕ್ಟರ್ ಮುನಿಕೃಷ್ಣ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…