ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್

ಶ್ರೀ ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ  ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ದೊಡ್ಡಬಳ್ಳಾಪುರ ತಾಲ್ಲೂಕು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ 2023-24ನೇ ಸಾಲಿನ ಬ್ರಹ್ಮರಥೋತ್ಸವದ  ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಥೋತ್ಸವದಲ್ಲಿ ಹೆಚ್ಚಿನ ಪ್ರಮಾಣದ ಜನರು ಭಾಗವಹಿಸುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು, ಆಂಬ್ಯುಲೆನ್ಸ್ ವ್ಯವಸ್ಥೆ ಜೊತೆಗೆ ವೈದ್ಯಾಧಿಕಾರಿಗಳು ಸಕ್ರಿಯವಾಗಿರಲು ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು. ವಿದ್ಯುತ್ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಲು ಬೆಸ್ಕಾಂ ಸಿಬ್ಬಂದಿಗೆ ತಿಳಿಸಿದರು.

ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗದಂತೆ ಎಚ್ಚರ ವಹಿಸಿ ಎಂದರು. ವಾಹನ ದಟ್ಟಣೆ ಉಂಟಾಗದಂತೆ ಪಾರ್ಕಿಂಗ್ ವ್ಯವಸ್ಥೆ, ಬಸ್ ಗಳ ವ್ಯವಸ್ಥೆ, ಪೊಲೀಸ್ ಸಿಬ್ಬಂದಿಯನ್ನ ನೇಮಿಸಲು ತಿಳಿಸಿದರು.

ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಿ, ಸ್ವಚ್ಛತೆ ಕಾಪಾಡಲು ತಿಳಿಸಿದರು.  ಸ್ವಸಹಾಯ ಗುಂಪುಗಳ  ಮಳಿಗೆಗಳಿಗೆ ವ್ಯವಸ್ಥೆ ಕಲ್ಪಿಸಲು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಹೆಚ್ ಅಮರೇಶ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ದೊಡ್ಡಬಳ್ಳಾಪುರ ತಾಲ್ಲೂಕು ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್, ಧಾರ್ಮಿಕ ದತ್ತಿ  ತಹಸೀಲ್ದಾರ್ ಜಿ ಜೆ ಹೇಮಾವತಿ,  ದೊಡ್ಡಬಳ್ಳಾಪುರ ಸರ್ಕಲ್ ಇನ್ಸ್ ಪೆಕ್ಟರ್ ಮುನಿಕೃಷ್ಣ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

28 minutes ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

9 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

13 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

22 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago