ಶ್ರೀ ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ದೊಡ್ಡಬಳ್ಳಾಪುರ ತಾಲ್ಲೂಕು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ 2023-24ನೇ ಸಾಲಿನ ಬ್ರಹ್ಮರಥೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಥೋತ್ಸವದಲ್ಲಿ ಹೆಚ್ಚಿನ ಪ್ರಮಾಣದ ಜನರು ಭಾಗವಹಿಸುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು, ಆಂಬ್ಯುಲೆನ್ಸ್ ವ್ಯವಸ್ಥೆ ಜೊತೆಗೆ ವೈದ್ಯಾಧಿಕಾರಿಗಳು ಸಕ್ರಿಯವಾಗಿರಲು ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು. ವಿದ್ಯುತ್ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಲು ಬೆಸ್ಕಾಂ ಸಿಬ್ಬಂದಿಗೆ ತಿಳಿಸಿದರು.
ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗದಂತೆ ಎಚ್ಚರ ವಹಿಸಿ ಎಂದರು. ವಾಹನ ದಟ್ಟಣೆ ಉಂಟಾಗದಂತೆ ಪಾರ್ಕಿಂಗ್ ವ್ಯವಸ್ಥೆ, ಬಸ್ ಗಳ ವ್ಯವಸ್ಥೆ, ಪೊಲೀಸ್ ಸಿಬ್ಬಂದಿಯನ್ನ ನೇಮಿಸಲು ತಿಳಿಸಿದರು.
ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಿ, ಸ್ವಚ್ಛತೆ ಕಾಪಾಡಲು ತಿಳಿಸಿದರು. ಸ್ವಸಹಾಯ ಗುಂಪುಗಳ ಮಳಿಗೆಗಳಿಗೆ ವ್ಯವಸ್ಥೆ ಕಲ್ಪಿಸಲು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಹೆಚ್ ಅಮರೇಶ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ದೊಡ್ಡಬಳ್ಳಾಪುರ ತಾಲ್ಲೂಕು ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್, ಧಾರ್ಮಿಕ ದತ್ತಿ ತಹಸೀಲ್ದಾರ್ ಜಿ ಜೆ ಹೇಮಾವತಿ, ದೊಡ್ಡಬಳ್ಳಾಪುರ ಸರ್ಕಲ್ ಇನ್ಸ್ ಪೆಕ್ಟರ್ ಮುನಿಕೃಷ್ಣ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…