ಕೋಲಾರ: ಗುಣಮಟ್ಟದ ಹಾಲನ್ನು ಸರಬರಾಜು ಮಾಡುವ ಮೂಲಕ ಕೋಲಾರ ಜಿಲ್ಲಾ ಹಾಲು ಒಕ್ಕೂಟವನ್ನು ಬಳಪಡಿಸಬೇಕೆಂದು ಚಂಜಿಮಲೆ ಡೇರಿ ಅಧ್ಯಕ್ಷ ಹಾಗೂ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ಬಿ.ರಮೇಶ್ ಹಾಲು ಉತ್ಪಾದಕರಲ್ಲಿ ಮನವಿ ಮಾಡಿದರು.
ತಾಲೂಕಿನ ಚಂಜಿಮಲೆ ಹಾಲು ಉತ್ಪಾಕದರ ಸಂಘದಲ್ಲಿ ಶುಕ್ರವಾರ 2023-24 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ಸದರಿ ಹಾಲು ಡೇರಿ ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವ ಮೂಲಕ ಅರ್ಥಿಕವಾಗಿ ಬಲಗೊಂಡಿದ್ದು ಈ ಬಾರಿ ೧೦ ಲಕ್ಷಕ್ಕೂ ಹೆಚ್ಚು ವ್ಯಾಪಾರ ಲಾಭ ಗಳಿಸಿದ್ದು ಅದರಲ್ಲಿ 3.65 ನಿವ್ವಳ ಲಾಭ ಬಂದಿದೆ ಹಾಲು ಉತ್ಪಾದಕರು ಮತ್ತು ಕಾರ್ಯಕಾರಿ ಮಂಡಳಿ ಸದಸ್ಯರ ಸಹಕಾರ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಒಕ್ಕೂಟದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದು ಹಾಲು ಉತ್ಪಾದಕರಿಗೆ ತಿಳಿಸಿದರು.
ಹಾಲು ಉತ್ಪಾದಕರು ಡೇರಿಗೆ ಉತ್ತಮ ಹಾಲನ್ನು ಕೊಡುವುದರಿಂದ ಸಂಘದ ಜೊತೆಗೆ ಗ್ರಾಮವು ಅಭಿವೃದ್ಧಿಯಾಗುತ್ತದೆ ಮುಂದಿನ ದಿನಗಳಲ್ಲಿ ಗ್ರಾಮದ ಪ್ರತಿಯೊಬ್ಬರಿಗೂ ಡಿಸಿಸಿ ಬ್ಯಾಂಕ್ ನಿಂದ ಹಸುಗಳನ್ನು ಖರೀದಿಸಲು ಸಾಲ ಕೊಡಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕೋಲಾರ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಮಹೇಶ್, ವಿಸ್ತರಣಾಧಿಕಾರಿ ಎಸ್ ಸಮೀರ್ ಪಾಷಾ, ಸಂಘದ ನಿರ್ದೇಶಕರಾದ ಎನ್. ಶ್ರೀರಾಮಪ್ಪ, ಇ.ಚಂದ್ರಪ್ಪ, ಸಿ.ಎನ್ ಗುರುಮೂರ್ತಿ, ಕೆ ಶ್ರೀನಿವಾಸ್, ಎಂ ನರಸಿಂಹಪ್ಪ, ಪ್ರಸನ್ನ, ಅಲ್ಲಬಕಾಶ್, ಬಿ ರಾಜಪ್ಪ, ಡಿ.ಮುನೇಶ್, ಪುಷ್ಪ, ಗೌರಮ್ಮ, ಗ್ರಾಮ ಪಂಚಾಯಿತಿ ಸದಸ್ಯರಾದ ಗೋಪಾಲಪ್ಪ, ಸಿಎಂ ದೇವರಾಜ್, ಮಾಜಿ ಅಧ್ಯಕ್ಷ ಗೋಪಾಲಕೃಷ್ಣ, ಮುಖಂಡರಾದ ಬಾಲಪ್ಪ, ಕೆಂಪಣ್ಣ, ಎಂ ಶ್ರೀನಿವಾಸ್, ಎಂ ವೆಂಕಟೇಶ್, ಹಾಗೂ ಸಂಘದ ಕಾರ್ಯದರ್ಶಿ ಸಿ ಎಂ ಪಾಪಣ್ಣ, ಹಾಲು ಪರಿವೀಕ್ಷಕ ಸಿ.ಎಂ ಶ್ರೀನಿವಾಸಯ್ಯ, ಸಹಾಯಕ ಮೋಹನ್, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…