Categories: ಕೋಲಾರ

ಚಂಜಿಮಲೆ ಡೇರಿಗೆ 3.65 ಲಕ್ಷ ನಿವ್ವಳ ಲಾಭ- ಬಿ.ರಮೇಶ್

ಕೋಲಾರ: ಗುಣಮಟ್ಟದ ಹಾಲನ್ನು ಸರಬರಾಜು ಮಾಡುವ ಮೂಲಕ ಕೋಲಾರ ಜಿಲ್ಲಾ ಹಾಲು ಒಕ್ಕೂಟವನ್ನು ಬಳಪಡಿಸಬೇಕೆಂದು ಚಂಜಿಮಲೆ ಡೇರಿ ಅಧ್ಯಕ್ಷ ಹಾಗೂ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ಬಿ.ರಮೇಶ್ ಹಾಲು ಉತ್ಪಾದಕರಲ್ಲಿ ಮನವಿ ಮಾಡಿದರು.

ತಾಲೂಕಿನ ಚಂಜಿಮಲೆ ಹಾಲು ಉತ್ಪಾಕದರ ಸಂಘದಲ್ಲಿ ಶುಕ್ರವಾರ 2023-24 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ಸದರಿ ಹಾಲು ಡೇರಿ ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವ ಮೂಲಕ ಅರ್ಥಿಕವಾಗಿ ಬಲಗೊಂಡಿದ್ದು ಈ ಬಾರಿ ೧೦ ಲಕ್ಷಕ್ಕೂ ಹೆಚ್ಚು ವ್ಯಾಪಾರ ಲಾಭ ಗಳಿಸಿದ್ದು ಅದರಲ್ಲಿ 3.65 ನಿವ್ವಳ ಲಾಭ ಬಂದಿದೆ ಹಾಲು ಉತ್ಪಾದಕರು ಮತ್ತು ಕಾರ್ಯಕಾರಿ ಮಂಡಳಿ ಸದಸ್ಯರ ಸಹಕಾರ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಒಕ್ಕೂಟದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದು ಹಾಲು ಉತ್ಪಾದಕರಿಗೆ ತಿಳಿಸಿದರು.

ಹಾಲು ಉತ್ಪಾದಕರು ಡೇರಿಗೆ ಉತ್ತಮ ಹಾಲನ್ನು ಕೊಡುವುದರಿಂದ ಸಂಘದ ಜೊತೆಗೆ ಗ್ರಾಮವು ಅಭಿವೃದ್ಧಿಯಾಗುತ್ತದೆ ಮುಂದಿನ ದಿನಗಳಲ್ಲಿ ಗ್ರಾಮದ ಪ್ರತಿಯೊಬ್ಬರಿಗೂ ಡಿಸಿಸಿ ಬ್ಯಾಂಕ್ ನಿಂದ ಹಸುಗಳನ್ನು ಖರೀದಿಸಲು ಸಾಲ ಕೊಡಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕೋಲಾರ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಮಹೇಶ್, ವಿಸ್ತರಣಾಧಿಕಾರಿ ಎಸ್ ಸಮೀರ್ ಪಾಷಾ, ಸಂಘದ ನಿರ್ದೇಶಕರಾದ ಎನ್. ಶ್ರೀರಾಮಪ್ಪ, ಇ.ಚಂದ್ರಪ್ಪ, ಸಿ.ಎನ್ ಗುರುಮೂರ್ತಿ, ಕೆ ಶ್ರೀನಿವಾಸ್, ಎಂ ನರಸಿಂಹಪ್ಪ, ಪ್ರಸನ್ನ, ಅಲ್ಲಬಕಾಶ್, ಬಿ ರಾಜಪ್ಪ, ಡಿ.ಮುನೇಶ್, ಪುಷ್ಪ, ಗೌರಮ್ಮ, ಗ್ರಾಮ ಪಂಚಾಯಿತಿ ಸದಸ್ಯರಾದ ಗೋಪಾಲಪ್ಪ, ಸಿಎಂ ದೇವರಾಜ್, ಮಾಜಿ ಅಧ್ಯಕ್ಷ ಗೋಪಾಲಕೃಷ್ಣ, ಮುಖಂಡರಾದ ಬಾಲಪ್ಪ, ಕೆಂಪಣ್ಣ, ಎಂ ಶ್ರೀನಿವಾಸ್, ಎಂ ವೆಂಕಟೇಶ್, ಹಾಗೂ ಸಂಘದ ಕಾರ್ಯದರ್ಶಿ ಸಿ ಎಂ ಪಾಪಣ್ಣ, ಹಾಲು ಪರಿವೀಕ್ಷಕ ಸಿ.ಎಂ ಶ್ರೀನಿವಾಸಯ್ಯ, ಸಹಾಯಕ ಮೋಹನ್, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

12 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

13 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

14 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

14 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

18 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

20 hours ago