Categories: ಕೋಲಾರ

ಚಂಜಿಮಲೆ ಡೇರಿಗೆ 3.65 ಲಕ್ಷ ನಿವ್ವಳ ಲಾಭ- ಬಿ.ರಮೇಶ್

ಕೋಲಾರ: ಗುಣಮಟ್ಟದ ಹಾಲನ್ನು ಸರಬರಾಜು ಮಾಡುವ ಮೂಲಕ ಕೋಲಾರ ಜಿಲ್ಲಾ ಹಾಲು ಒಕ್ಕೂಟವನ್ನು ಬಳಪಡಿಸಬೇಕೆಂದು ಚಂಜಿಮಲೆ ಡೇರಿ ಅಧ್ಯಕ್ಷ ಹಾಗೂ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ಬಿ.ರಮೇಶ್ ಹಾಲು ಉತ್ಪಾದಕರಲ್ಲಿ ಮನವಿ ಮಾಡಿದರು.

ತಾಲೂಕಿನ ಚಂಜಿಮಲೆ ಹಾಲು ಉತ್ಪಾಕದರ ಸಂಘದಲ್ಲಿ ಶುಕ್ರವಾರ 2023-24 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ಸದರಿ ಹಾಲು ಡೇರಿ ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವ ಮೂಲಕ ಅರ್ಥಿಕವಾಗಿ ಬಲಗೊಂಡಿದ್ದು ಈ ಬಾರಿ ೧೦ ಲಕ್ಷಕ್ಕೂ ಹೆಚ್ಚು ವ್ಯಾಪಾರ ಲಾಭ ಗಳಿಸಿದ್ದು ಅದರಲ್ಲಿ 3.65 ನಿವ್ವಳ ಲಾಭ ಬಂದಿದೆ ಹಾಲು ಉತ್ಪಾದಕರು ಮತ್ತು ಕಾರ್ಯಕಾರಿ ಮಂಡಳಿ ಸದಸ್ಯರ ಸಹಕಾರ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಒಕ್ಕೂಟದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದು ಹಾಲು ಉತ್ಪಾದಕರಿಗೆ ತಿಳಿಸಿದರು.

ಹಾಲು ಉತ್ಪಾದಕರು ಡೇರಿಗೆ ಉತ್ತಮ ಹಾಲನ್ನು ಕೊಡುವುದರಿಂದ ಸಂಘದ ಜೊತೆಗೆ ಗ್ರಾಮವು ಅಭಿವೃದ್ಧಿಯಾಗುತ್ತದೆ ಮುಂದಿನ ದಿನಗಳಲ್ಲಿ ಗ್ರಾಮದ ಪ್ರತಿಯೊಬ್ಬರಿಗೂ ಡಿಸಿಸಿ ಬ್ಯಾಂಕ್ ನಿಂದ ಹಸುಗಳನ್ನು ಖರೀದಿಸಲು ಸಾಲ ಕೊಡಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕೋಲಾರ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಮಹೇಶ್, ವಿಸ್ತರಣಾಧಿಕಾರಿ ಎಸ್ ಸಮೀರ್ ಪಾಷಾ, ಸಂಘದ ನಿರ್ದೇಶಕರಾದ ಎನ್. ಶ್ರೀರಾಮಪ್ಪ, ಇ.ಚಂದ್ರಪ್ಪ, ಸಿ.ಎನ್ ಗುರುಮೂರ್ತಿ, ಕೆ ಶ್ರೀನಿವಾಸ್, ಎಂ ನರಸಿಂಹಪ್ಪ, ಪ್ರಸನ್ನ, ಅಲ್ಲಬಕಾಶ್, ಬಿ ರಾಜಪ್ಪ, ಡಿ.ಮುನೇಶ್, ಪುಷ್ಪ, ಗೌರಮ್ಮ, ಗ್ರಾಮ ಪಂಚಾಯಿತಿ ಸದಸ್ಯರಾದ ಗೋಪಾಲಪ್ಪ, ಸಿಎಂ ದೇವರಾಜ್, ಮಾಜಿ ಅಧ್ಯಕ್ಷ ಗೋಪಾಲಕೃಷ್ಣ, ಮುಖಂಡರಾದ ಬಾಲಪ್ಪ, ಕೆಂಪಣ್ಣ, ಎಂ ಶ್ರೀನಿವಾಸ್, ಎಂ ವೆಂಕಟೇಶ್, ಹಾಗೂ ಸಂಘದ ಕಾರ್ಯದರ್ಶಿ ಸಿ ಎಂ ಪಾಪಣ್ಣ, ಹಾಲು ಪರಿವೀಕ್ಷಕ ಸಿ.ಎಂ ಶ್ರೀನಿವಾಸಯ್ಯ, ಸಹಾಯಕ ಮೋಹನ್, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

11 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

12 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

13 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

13 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

20 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago