ಕೋಲಾರ: ಗುಣಮಟ್ಟದ ಹಾಲನ್ನು ಸರಬರಾಜು ಮಾಡುವ ಮೂಲಕ ಕೋಲಾರ ಜಿಲ್ಲಾ ಹಾಲು ಒಕ್ಕೂಟವನ್ನು ಬಳಪಡಿಸಬೇಕೆಂದು ಚಂಜಿಮಲೆ ಡೇರಿ ಅಧ್ಯಕ್ಷ ಹಾಗೂ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ಬಿ.ರಮೇಶ್ ಹಾಲು ಉತ್ಪಾದಕರಲ್ಲಿ ಮನವಿ ಮಾಡಿದರು.
ತಾಲೂಕಿನ ಚಂಜಿಮಲೆ ಹಾಲು ಉತ್ಪಾಕದರ ಸಂಘದಲ್ಲಿ ಶುಕ್ರವಾರ 2023-24 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ಸದರಿ ಹಾಲು ಡೇರಿ ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವ ಮೂಲಕ ಅರ್ಥಿಕವಾಗಿ ಬಲಗೊಂಡಿದ್ದು ಈ ಬಾರಿ ೧೦ ಲಕ್ಷಕ್ಕೂ ಹೆಚ್ಚು ವ್ಯಾಪಾರ ಲಾಭ ಗಳಿಸಿದ್ದು ಅದರಲ್ಲಿ 3.65 ನಿವ್ವಳ ಲಾಭ ಬಂದಿದೆ ಹಾಲು ಉತ್ಪಾದಕರು ಮತ್ತು ಕಾರ್ಯಕಾರಿ ಮಂಡಳಿ ಸದಸ್ಯರ ಸಹಕಾರ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಒಕ್ಕೂಟದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದು ಹಾಲು ಉತ್ಪಾದಕರಿಗೆ ತಿಳಿಸಿದರು.
ಹಾಲು ಉತ್ಪಾದಕರು ಡೇರಿಗೆ ಉತ್ತಮ ಹಾಲನ್ನು ಕೊಡುವುದರಿಂದ ಸಂಘದ ಜೊತೆಗೆ ಗ್ರಾಮವು ಅಭಿವೃದ್ಧಿಯಾಗುತ್ತದೆ ಮುಂದಿನ ದಿನಗಳಲ್ಲಿ ಗ್ರಾಮದ ಪ್ರತಿಯೊಬ್ಬರಿಗೂ ಡಿಸಿಸಿ ಬ್ಯಾಂಕ್ ನಿಂದ ಹಸುಗಳನ್ನು ಖರೀದಿಸಲು ಸಾಲ ಕೊಡಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕೋಲಾರ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಮಹೇಶ್, ವಿಸ್ತರಣಾಧಿಕಾರಿ ಎಸ್ ಸಮೀರ್ ಪಾಷಾ, ಸಂಘದ ನಿರ್ದೇಶಕರಾದ ಎನ್. ಶ್ರೀರಾಮಪ್ಪ, ಇ.ಚಂದ್ರಪ್ಪ, ಸಿ.ಎನ್ ಗುರುಮೂರ್ತಿ, ಕೆ ಶ್ರೀನಿವಾಸ್, ಎಂ ನರಸಿಂಹಪ್ಪ, ಪ್ರಸನ್ನ, ಅಲ್ಲಬಕಾಶ್, ಬಿ ರಾಜಪ್ಪ, ಡಿ.ಮುನೇಶ್, ಪುಷ್ಪ, ಗೌರಮ್ಮ, ಗ್ರಾಮ ಪಂಚಾಯಿತಿ ಸದಸ್ಯರಾದ ಗೋಪಾಲಪ್ಪ, ಸಿಎಂ ದೇವರಾಜ್, ಮಾಜಿ ಅಧ್ಯಕ್ಷ ಗೋಪಾಲಕೃಷ್ಣ, ಮುಖಂಡರಾದ ಬಾಲಪ್ಪ, ಕೆಂಪಣ್ಣ, ಎಂ ಶ್ರೀನಿವಾಸ್, ಎಂ ವೆಂಕಟೇಶ್, ಹಾಗೂ ಸಂಘದ ಕಾರ್ಯದರ್ಶಿ ಸಿ ಎಂ ಪಾಪಣ್ಣ, ಹಾಲು ಪರಿವೀಕ್ಷಕ ಸಿ.ಎಂ ಶ್ರೀನಿವಾಸಯ್ಯ, ಸಹಾಯಕ ಮೋಹನ್, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…