ಕೋಲಾರ: ತಾಲೂಕಿನ ವೇಮಗಲ್ ಹೋಬಳಿಯ ಸೀತಿ ಗ್ರಾಪಂ ವ್ಯಾಪ್ತಿಯ ಚಂಜಿಮಲೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ಬಿ.ರಮೇಶ್ ಅವರು ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಚಂಜಿಮಲೆ.ಬಿ ರಮೇಶ್ ಮಾತನಾಡಿ, ನಮ್ಮ ಗ್ರಾಮದ ಡೇರಿ ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿ ಇರಬೇಕು ಅನಿಟ್ಟಿನಲ್ಲಿ ಉತ್ಪಾದಕರು ಗುಣಮಟ್ಟದ ಹಾಲು ಉತ್ಪಾದನೆ ಮಾಡಬೇಕು. ಗ್ರಾಮದ ಪ್ರತಿ ಮನೆಯಲ್ಲಿ ಕನಿಷ್ಠ 25 ಲೀಟರ್ ಹಾಲು ಉತ್ಪಾದಿಸಲು ಬೇಕಾಗುವ ಸಹಕಾರವನ್ನು ಡಿಸಿಸಿ ಬ್ಯಾಂಕ್ ವತಿಯಿಂದ ಕೊಡಿಸಲಾಗುತ್ತದೆ ಎಂದು ತಿಳಿಸಿದರು
ಹಾಲು ಉತ್ಪಾದಕರ ಮಕ್ಕಳಿಗೆ ಉಚಿತ ಶಿಕ್ಷಣ ಜೊತೆಗೆ ಜೀವವಿಮೆ, ಉಚಿತ ಆರೋಗ್ಯ ತಪಾಸಣೆ ಹಾಗೂ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಸದಾ ದುಡಿಯುವ ಮನಸ್ಸು ಇದ್ದು , ಇವು ಎಲ್ಲವುಗಳನ್ನು ಕೊಡಿಸುವ ಜವಾಬ್ದಾರಿ ನನ್ನ ಮೇಲಿದೆ. ಜೊತೆಗೆ ನಮ್ಮ ರೈತರು ನಮ್ಮ ಸಂಘಕ್ಕೆ ಗುಣಮಟ್ಟದ ಹಾಲನ್ನ ಸರಬರಾಜು ಮಾಡುವುದರಿಂದ ನಮ್ಮ ಸಂಘ ಬೇಗ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಡಿ ಮುನೇಶ್, ಶ್ರೀನಿವಾಸ್, ರಾಜಪ್ಪ, ಶ್ರೀರಾಮ್, ಗುರುಮೂರ್ತಿ, ಪ್ರಸನ್ನ, ನರಸಿಂಹಪ್ಪ, ಅಲ್ಲ ಬಕಾಶ್, ಪುಷ್ಪ ಮುನ್ನೇಗೌಡ, ದೇವರಾಜ್, ಚಂದ್ರು, ಗ್ರಾಮ ಪಂಚಾಯಿತಿ ಸದಸ್ಯರಾದ ದೇವರಾಜು, ಸೀತಾಲಕ್ಷ್ಮಮ್ಮ, ಗೋಪಾಲಪ್ಪ, ಮುಖಂಡರಾದ ಕವಿತಾ ಮುನಿರಾಜ್, ಮುರಳಿ, ಗೋಪಾಲಕೃಷ್ಣ, ವೆಂಕಟೇಶ್, ಕೃಷ್ಣೇಗೌಡ, ಚಂದ್ರಣ್ಣ, ಇ ಚಂದ್ರು, ಸತೀಶ್, ಮನೋಜ್, ನಾರಾಯಣಸ್ವಾಮಿ, ಡೇರಿ ಕಾರ್ಯದರ್ಶಿ ಪಾಪಣ್ಣ, ಸಹಾಯಕರಾದ ಶ್ರೀನಿವಾಸ್, ಮೋಹನ್ ಉಪಸ್ಥಿತರಿದ್ದರು
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…