Categories: ಕೋಲಾರ

ಚಂಜಿಮಲೆ ಡೇರಿ ಅಧ್ಯಕ್ಷರಾಗಿ ಬಿ.ರಮೇಶ್ ಅವಿರೋಧ ಆಯ್ಕೆ

ಕೋಲಾರ: ತಾಲೂಕಿನ ವೇಮಗಲ್ ಹೋಬಳಿಯ ಸೀತಿ ಗ್ರಾಪಂ ವ್ಯಾಪ್ತಿಯ ಚಂಜಿಮಲೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ಬಿ.ರಮೇಶ್ ಅವರು ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಚಂಜಿಮಲೆ.ಬಿ ರಮೇಶ್ ಮಾತನಾಡಿ, ನಮ್ಮ ಗ್ರಾಮದ ಡೇರಿ ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿ ಇರಬೇಕು ಅನಿಟ್ಟಿನಲ್ಲಿ ಉತ್ಪಾದಕರು ಗುಣಮಟ್ಟದ ಹಾಲು ಉತ್ಪಾದನೆ ಮಾಡಬೇಕು. ಗ್ರಾಮದ ಪ್ರತಿ ಮನೆಯಲ್ಲಿ ಕನಿಷ್ಠ 25 ಲೀಟರ್ ಹಾಲು ಉತ್ಪಾದಿಸಲು ಬೇಕಾಗುವ ಸಹಕಾರವನ್ನು ಡಿಸಿಸಿ ಬ್ಯಾಂಕ್ ವತಿಯಿಂದ ಕೊಡಿಸಲಾಗುತ್ತದೆ ಎಂದು ತಿಳಿಸಿದರು

ಹಾಲು ಉತ್ಪಾದಕರ ಮಕ್ಕಳಿಗೆ ಉಚಿತ ಶಿಕ್ಷಣ ಜೊತೆಗೆ ಜೀವವಿಮೆ, ಉಚಿತ ಆರೋಗ್ಯ ತಪಾಸಣೆ ಹಾಗೂ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಸದಾ ದುಡಿಯುವ ಮನಸ್ಸು ಇದ್ದು , ಇವು ಎಲ್ಲವುಗಳನ್ನು ಕೊಡಿಸುವ ಜವಾಬ್ದಾರಿ ನನ್ನ ಮೇಲಿದೆ. ಜೊತೆಗೆ ನಮ್ಮ ರೈತರು ನಮ್ಮ ಸಂಘಕ್ಕೆ ಗುಣಮಟ್ಟದ ಹಾಲನ್ನ ಸರಬರಾಜು ಮಾಡುವುದರಿಂದ ನಮ್ಮ ಸಂಘ ಬೇಗ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಡಿ ಮುನೇಶ್, ಶ್ರೀನಿವಾಸ್, ರಾಜಪ್ಪ, ಶ್ರೀರಾಮ್, ಗುರುಮೂರ್ತಿ, ಪ್ರಸನ್ನ, ನರಸಿಂಹಪ್ಪ, ಅಲ್ಲ ಬಕಾಶ್, ಪುಷ್ಪ ಮುನ್ನೇಗೌಡ, ದೇವರಾಜ್, ಚಂದ್ರು, ಗ್ರಾಮ ಪಂಚಾಯಿತಿ ಸದಸ್ಯರಾದ ದೇವರಾಜು, ಸೀತಾಲಕ್ಷ್ಮಮ್ಮ, ಗೋಪಾಲಪ್ಪ, ಮುಖಂಡರಾದ ಕವಿತಾ ಮುನಿರಾಜ್, ಮುರಳಿ, ಗೋಪಾಲಕೃಷ್ಣ, ವೆಂಕಟೇಶ್, ಕೃಷ್ಣೇಗೌಡ, ಚಂದ್ರಣ್ಣ, ಇ ಚಂದ್ರು, ಸತೀಶ್, ಮನೋಜ್, ನಾರಾಯಣಸ್ವಾಮಿ, ಡೇರಿ ಕಾರ್ಯದರ್ಶಿ ಪಾಪಣ್ಣ, ಸಹಾಯಕರಾದ ಶ್ರೀನಿವಾಸ್, ಮೋಹನ್ ಉಪಸ್ಥಿತರಿದ್ದರು

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago