Categories: ಕೋಲಾರ

ಚಂಜಿಮಲೆ ಡೇರಿ ಅಧ್ಯಕ್ಷರಾಗಿ ಬಿ.ರಮೇಶ್ ಅವಿರೋಧ ಆಯ್ಕೆ

ಕೋಲಾರ: ತಾಲೂಕಿನ ವೇಮಗಲ್ ಹೋಬಳಿಯ ಸೀತಿ ಗ್ರಾಪಂ ವ್ಯಾಪ್ತಿಯ ಚಂಜಿಮಲೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ಬಿ.ರಮೇಶ್ ಅವರು ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಚಂಜಿಮಲೆ.ಬಿ ರಮೇಶ್ ಮಾತನಾಡಿ, ನಮ್ಮ ಗ್ರಾಮದ ಡೇರಿ ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿ ಇರಬೇಕು ಅನಿಟ್ಟಿನಲ್ಲಿ ಉತ್ಪಾದಕರು ಗುಣಮಟ್ಟದ ಹಾಲು ಉತ್ಪಾದನೆ ಮಾಡಬೇಕು. ಗ್ರಾಮದ ಪ್ರತಿ ಮನೆಯಲ್ಲಿ ಕನಿಷ್ಠ 25 ಲೀಟರ್ ಹಾಲು ಉತ್ಪಾದಿಸಲು ಬೇಕಾಗುವ ಸಹಕಾರವನ್ನು ಡಿಸಿಸಿ ಬ್ಯಾಂಕ್ ವತಿಯಿಂದ ಕೊಡಿಸಲಾಗುತ್ತದೆ ಎಂದು ತಿಳಿಸಿದರು

ಹಾಲು ಉತ್ಪಾದಕರ ಮಕ್ಕಳಿಗೆ ಉಚಿತ ಶಿಕ್ಷಣ ಜೊತೆಗೆ ಜೀವವಿಮೆ, ಉಚಿತ ಆರೋಗ್ಯ ತಪಾಸಣೆ ಹಾಗೂ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಸದಾ ದುಡಿಯುವ ಮನಸ್ಸು ಇದ್ದು , ಇವು ಎಲ್ಲವುಗಳನ್ನು ಕೊಡಿಸುವ ಜವಾಬ್ದಾರಿ ನನ್ನ ಮೇಲಿದೆ. ಜೊತೆಗೆ ನಮ್ಮ ರೈತರು ನಮ್ಮ ಸಂಘಕ್ಕೆ ಗುಣಮಟ್ಟದ ಹಾಲನ್ನ ಸರಬರಾಜು ಮಾಡುವುದರಿಂದ ನಮ್ಮ ಸಂಘ ಬೇಗ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಡಿ ಮುನೇಶ್, ಶ್ರೀನಿವಾಸ್, ರಾಜಪ್ಪ, ಶ್ರೀರಾಮ್, ಗುರುಮೂರ್ತಿ, ಪ್ರಸನ್ನ, ನರಸಿಂಹಪ್ಪ, ಅಲ್ಲ ಬಕಾಶ್, ಪುಷ್ಪ ಮುನ್ನೇಗೌಡ, ದೇವರಾಜ್, ಚಂದ್ರು, ಗ್ರಾಮ ಪಂಚಾಯಿತಿ ಸದಸ್ಯರಾದ ದೇವರಾಜು, ಸೀತಾಲಕ್ಷ್ಮಮ್ಮ, ಗೋಪಾಲಪ್ಪ, ಮುಖಂಡರಾದ ಕವಿತಾ ಮುನಿರಾಜ್, ಮುರಳಿ, ಗೋಪಾಲಕೃಷ್ಣ, ವೆಂಕಟೇಶ್, ಕೃಷ್ಣೇಗೌಡ, ಚಂದ್ರಣ್ಣ, ಇ ಚಂದ್ರು, ಸತೀಶ್, ಮನೋಜ್, ನಾರಾಯಣಸ್ವಾಮಿ, ಡೇರಿ ಕಾರ್ಯದರ್ಶಿ ಪಾಪಣ್ಣ, ಸಹಾಯಕರಾದ ಶ್ರೀನಿವಾಸ್, ಮೋಹನ್ ಉಪಸ್ಥಿತರಿದ್ದರು

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

2 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

3 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

5 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

18 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

22 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago