ಸೆಪ್ಟಂಬರ್ 7 ರಂದು ಭಾನುವಾರ ಮಧ್ಯರಾತ್ರಿ ಚಂದ್ರಗ್ರಹಣ ಕಂಡುಬಂದಿದ್ದು, ಈ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯವನ್ನ ಭಾನುವಾರ ಸಂಜೆ 4:30 ಗಂಟೆಗೆ ಬಂದ್ ಮಾಡಲಾಗಿತ್ತು.
ಪ್ರತಿ ದಿನವೂ ರಾತ್ರಿ 8:30ಕ್ಕೆ ಕ್ಲೋಸ್ ಮಾಡಲಾಗುತ್ತಿದ್ದ ದೇವಾಲಯದ ಬಾಗಿಲನ್ನ ಗ್ರಹಣದ ಅಂಗವಾಗಿ ಸಂಜೆ 4:30ಕ್ಕೆ ಮುಚ್ಚಲಾಗಿತ್ತು. ಇನ್ನೂ ಗ್ರಹಣದ ನಂತರ ಎಂದಿನಂತೆ ಇಂದು ಬೆಳಿಗ್ಗೆ ಶುದ್ಧೀಕರಣ ಮಾಡಿದ ಬಳಿಕ ದೇವಾಲಯದ ಬಾಗಿಲು ತೆರೆದು. ಭಕ್ತಾಧಿಗಳು ದೇವರ ದರ್ಶನ ಪಡೆಯಲು ಅನುವು ಮಾಡಿಕೊಡಲಾಯಿತು.
ಸದ್ಯ ಚಂದ್ರಗ್ರಹಣ ಮುಕ್ತಾಯವಾಗಿದ್ದು, ಘಾಟಿ ಸುಬ್ರಹ್ಮಣ್ಯ ದೇವಾಲಯವನ್ನು ಶುದ್ದೀಕರಣ ಮಾಡಿ, ಬಾಗಿಲು ತೆರೆದು, ದೇವರಿಗೆ ಎಂದಿನಂತೆ ಪ್ರಾತಃ ಕಾಲದ ಪೂಜೆ ಆರಂಭ ಮಾಡಲಾಗಿದೆ.
ದೇವಾಲಯದ ಅರ್ಚಕರಿಂದ ವಿಗ್ರಹಗಳನ್ನು ಶುದ್ದಿಕರಿಸಿ ಪ್ರಥಮ ಪೂಜೆ ಸಲ್ಲಿಕೆ ಮಾಡಲಾಯಿತು. ಇಂದು ಬೆಳಗ್ಗೆ 8 ಗಂಟೆ ನಂತರ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…