ಚಂದ್ರಗ್ರಹಣ ಮುಕ್ತಾಯ: ಘಾಟಿ ಸುಬ್ರಹ್ಮಣ್ಯ ದೇವಾಲಯ ಶುದ್ದೀಕರಣ: ಗರ್ಭಗುಡಿ ಬಾಗಿಲು ಓಪನ್: ಎಂದಿನಂತೆ ಪ್ರಾತಃ ಕಾಲ ಪೂಜೆ ಆರಂಭ

ಸೆಪ್ಟಂಬರ್ 7 ರಂದು ಭಾನುವಾರ ಮಧ್ಯರಾತ್ರಿ ಚಂದ್ರಗ್ರಹಣ ಕಂಡುಬಂದಿದ್ದು, ಈ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯವನ್ನ ಭಾನುವಾರ ಸಂಜೆ 4:30 ಗಂಟೆಗೆ ಬಂದ್‌ ಮಾಡಲಾಗಿತ್ತು.

ಪ್ರತಿ ದಿನವೂ ರಾತ್ರಿ 8:30ಕ್ಕೆ ಕ್ಲೋಸ್ ಮಾಡಲಾಗುತ್ತಿದ್ದ ದೇವಾಲಯದ ಬಾಗಿಲನ್ನ ಗ್ರಹಣದ ಅಂಗವಾಗಿ ಸಂಜೆ 4:30ಕ್ಕೆ ಮುಚ್ಚಲಾಗಿತ್ತು. ಇನ್ನೂ ಗ್ರಹಣದ ನಂತರ ಎಂದಿನಂತೆ ಇಂದು ಬೆಳಿಗ್ಗೆ ಶುದ್ಧೀಕರಣ ಮಾಡಿದ ಬಳಿಕ ದೇವಾಲಯದ ಬಾಗಿಲು ತೆರೆದು. ಭಕ್ತಾಧಿಗಳು ದೇವರ ದರ್ಶನ ಪಡೆಯಲು ಅನುವು ಮಾಡಿಕೊಡಲಾಯಿತು.

ಸದ್ಯ ಚಂದ್ರಗ್ರಹಣ ಮುಕ್ತಾಯವಾಗಿದ್ದು, ಘಾಟಿ ಸುಬ್ರಹ್ಮಣ್ಯ ದೇವಾಲಯವನ್ನು ಶುದ್ದೀಕರಣ ಮಾಡಿ, ಬಾಗಿಲು ತೆರೆದು, ದೇವರಿಗೆ ಎಂದಿನಂತೆ ಪ್ರಾತಃ ಕಾಲದ ಪೂಜೆ ಆರಂಭ ಮಾಡಲಾಗಿದೆ.

ದೇವಾಲಯದ ಅರ್ಚಕರಿಂದ ವಿಗ್ರಹಗಳನ್ನು ಶುದ್ದಿಕರಿಸಿ ಪ್ರಥಮ ಪೂಜೆ ಸಲ್ಲಿಕೆ ಮಾಡಲಾಯಿತು. ಇಂದು ಬೆಳಗ್ಗೆ 8 ಗಂಟೆ ನಂತರ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.

Ramesh Babu

Journalist

Recent Posts

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

4 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

9 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

9 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

10 hours ago

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

20 hours ago