ಸೆಪ್ಟಂಬರ್ 7 ರಂದು ಭಾನುವಾರ ಮಧ್ಯರಾತ್ರಿ ಚಂದ್ರಗ್ರಹಣ ಕಂಡುಬಂದಿದ್ದು, ಈ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯವನ್ನ ಭಾನುವಾರ ಸಂಜೆ 4:30 ಗಂಟೆಗೆ ಬಂದ್ ಮಾಡಲಾಗಿತ್ತು.
ಪ್ರತಿ ದಿನವೂ ರಾತ್ರಿ 8:30ಕ್ಕೆ ಕ್ಲೋಸ್ ಮಾಡಲಾಗುತ್ತಿದ್ದ ದೇವಾಲಯದ ಬಾಗಿಲನ್ನ ಗ್ರಹಣದ ಅಂಗವಾಗಿ ಸಂಜೆ 4:30ಕ್ಕೆ ಮುಚ್ಚಲಾಗಿತ್ತು. ಇನ್ನೂ ಗ್ರಹಣದ ನಂತರ ಎಂದಿನಂತೆ ಇಂದು ಬೆಳಿಗ್ಗೆ ಶುದ್ಧೀಕರಣ ಮಾಡಿದ ಬಳಿಕ ದೇವಾಲಯದ ಬಾಗಿಲು ತೆರೆದು. ಭಕ್ತಾಧಿಗಳು ದೇವರ ದರ್ಶನ ಪಡೆಯಲು ಅನುವು ಮಾಡಿಕೊಡಲಾಯಿತು.
ಸದ್ಯ ಚಂದ್ರಗ್ರಹಣ ಮುಕ್ತಾಯವಾಗಿದ್ದು, ಘಾಟಿ ಸುಬ್ರಹ್ಮಣ್ಯ ದೇವಾಲಯವನ್ನು ಶುದ್ದೀಕರಣ ಮಾಡಿ, ಬಾಗಿಲು ತೆರೆದು, ದೇವರಿಗೆ ಎಂದಿನಂತೆ ಪ್ರಾತಃ ಕಾಲದ ಪೂಜೆ ಆರಂಭ ಮಾಡಲಾಗಿದೆ.
ದೇವಾಲಯದ ಅರ್ಚಕರಿಂದ ವಿಗ್ರಹಗಳನ್ನು ಶುದ್ದಿಕರಿಸಿ ಪ್ರಥಮ ಪೂಜೆ ಸಲ್ಲಿಕೆ ಮಾಡಲಾಯಿತು. ಇಂದು ಬೆಳಗ್ಗೆ 8 ಗಂಟೆ ನಂತರ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…