ಚಂದ್ರಗ್ರಹಣ: ಮೌಢ್ಯತೆಯನ್ನ ಮೆಟ್ಟಿನಿಂತು ಸ್ಮಶಾನದಲ್ಲಿ ಕಳ್ಳೇಪುರಿ ತಿನ್ನುತ್ತಾ ಪ್ರಕೃತಿಯಲ್ಲಿ ನಡೆಯುವ ಕೌತುಕವನ್ನ ಕಣ್ತುಂಬಿಕೊಂಡ ದೊರೆಕಾವಲು ಗ್ರಾಮಸ್ಥರು

ಚಂದ್ರಗ್ರಹಣದ ಸಂದರ್ಭದಲ್ಲಿ ಯಾರೂ ಕೂಡ ಮನೆಯಿಂದ ಹೊರಬರಬಾರದು, ಗರ್ಭಿಣೀಯರಿಗೆ ಗ್ರಹಣದಿಂದ ಅಪಾಯ ಇದೆ, ಗ್ರಹಣ ವೇಳೆ ಊಟ ಸೇರಿದಂತೆ ಒಳ್ಳೆ ಕೆಲಸಗಳನ್ನ ಏನೂ ಮಾಡಮಾಡಬಾರದು ಎಂಬ ಮೌಢ್ಯತೆಗಳಿವೆ. ಇವುಗಳನ್ನ ಮೆಟ್ಟಿನಿಂತು ಚಂದ್ರಗ್ರಹಣ ಸಂಭವಿಸುವ ಸಮಯದಲ್ಲೇ ಸ್ಮಶಾನದಲ್ಲಿ ವಾಸ ಮಾಡಿ, ಸಮಾಧಿಗಳ ಮೇಲೆ ಕುಳಿತು ಕಳ್ಳೇ ಪುರಿ ತಿಂದು, ರಂಗ ಗೀತೆಗಳನ್ನ ಹಾಡಿ, ಪ್ರಕೃತಿಯಲ್ಲಿ ನಡೆಯುವ ಕೌತುಕವನ್ನ ಕಣ್ತುಂಬಿ ಕೊಂಡ ದೇವನಹಳ್ಳಿಯ ದೊರೆಕಾವಲು ಗ್ರಾಮಸ್ಥರು.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯ ಅಧ್ಯಕ್ಷ ಹುಲಿಕಲ್ ನಟರಾಜ್ ನೇತೃತ್ವದಲ್ಲಿ ಗ್ರಾಮದ ಸ್ಮಶಾನದಲ್ಲಿ ಸೇರಿದ ಗ್ರಾಮಸ್ಥರು, ಸಮಾಧಿಗಳ ಮೇಲೆ ಕುಳಿತು ಚಂದ್ರಗ್ರಹಣದ ಸೌಂದರ್ಯ ಸವಿದರು, ಸತ್ತ ಹೆಣದ ಮೇಲೆ ಎಸೆಯುತ್ತಿದ್ದ ಕಳ್ಳೇಪುರಿಯನ್ನ ತಿಂದರು, ರಂಗ ಗೀತೆಗಳನ್ನ ಹಾಡಿ ಸಂಭ್ರಮ ಪಟ್ಟರು, ಚಲನೆಯ ಕಾರಣದಿಂದ ನೆರಳು ಬೆಳಕಿನ ಆಟದಲ್ಲಿ ಗ್ರಹಣಗಳ ಸಂಭವಿಸುತ್ತವೆ, ಅದು ಪ್ರಕೃತಿಯಲ್ಲಿ ನಡೆಯುವ ಸಹಜ ಪ್ರಕ್ರಿಯೆ, ನಾವು ಪೂಜೆ- ಪುನಸ್ಕಾರ, ದಾನ ಮಾಡಿದರೆ ಗ್ರಹಣಗಳನ್ನ ನಿಲ್ಲಿಸಲು ಸಾಧ್ಯವೇ ಎಂದು ಹುಲಿಕಲ್ ನಟರಾಜ್ ಮೌಢ್ಯತೆ ಬಿತ್ತುವ ಜನರಿಗೆ ಸವಾಲು ಹಾಕಿದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

4 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

15 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

16 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago