ಬಹುನಿರೀಕ್ಷಿತ ಚಂದ್ರಯಾನ-3 ಗಗನನೌಕೆ ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ. ಆಕಾಶದೆತ್ತರಕ್ಕೆ ಚಿಮ್ಮಿರುವುದು ಚಂದ್ರಯಾನ ನೌಕೆ ಮಾತ್ರವಲ್ಲ; ನಮ್ಮ ಹೃದಯ. ನಮ್ಮ ಹೃದಯ ಮಾತ್ರವಲ್ಲ, ಶತಕೋಟಿ ಭಾರತೀಯರ ಹೃದಯ ಇಂದು ಆಗಸಕ್ಕೆ ಯಶಸ್ವಿಯಾಗಿ ಹಾರಿದೆ ಎಂದು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀಮಹಾಸ್ವಾಮೀಜಿ ಬಣ್ಣಿಸಿದ್ದಾರೆ.
ಭಾರತದ ಇತಿಹಾಸದಲ್ಲಿ ಇದು ಅಪರೂಪದಲ್ಲಿ ಅಪರೂಪದ ದಿನ. ಉಡಾವಣೆ ಯಶಸ್ವಿಯಾದದ್ದು ಎಲ್ಲಿಲ್ಲದ ಸಂಭ್ರಮ ತಂದಿದೆ. ನಮಗೇ ಇಷ್ಟು ಖುಷಿಯಾಗಿರಬೇಕಾದರೆ ಆ ವಿಜ್ಞಾನಿಗಳಿಗೆ ಅದೆಷ್ಟು ಸಂಸತಸವಾಗಿರಬೇಡ ಎಂದು ಸ್ವಾಮೀಜಿ ಉದ್ಗರಿಸಿದ್ದಾರೆ.
“ಹಿಂದಿನ ಕಾಲದಲ್ಲಿ ಋಷಿಮುನಿಗಳು ತಪಸ್ಸು ಮಾಡುತ್ತಿದ್ದುದನ್ನು ನಾವು ಕೇಳಿದ್ದೇವೆ. ಇಸ್ರೋದಲ್ಲಿ ವಿಜ್ಞಾನಿಗಳು ಮಾಡುತ್ತಿರುವುದು ತಪಸ್ಸಿಗೆ ಕಡಿಮೆಯೇನೂ ಅಲ್ಲ. ಅವರ ಅಗಾಧವಾದ ಪರಿಶ್ರಮ ಫಲಕೊಟ್ಟು ಆಕಾಶನೌಕೆ ಯಶಸ್ವಿಯಾಗಿ ಉಡಾವಣೆಯಾಗಿರುವುದು ಶತಕೋಟಿ ಭಾರತೀಯರು ಹೆಮ್ಮೆಪಡುವಂಥ ವಿಚಾರ” ಎಂದು ಸಂದೇಶದಲ್ಲಿ ವಿವರಿಸಿದ್ದಾರೆ.
ಆಕಾಶದಲ್ಲಿ ಭಾರತದ ಕೀರ್ತಿಪತಾಕೆ ಹಾರುತ್ತಿದೆ ಎಂಬ ಭಾವನೆ ಬರುತ್ತಿದೆ. ನಾವು, ಧರ್ಮಪುರುಷರೆಲ್ಲ ಸೇರಿ ಅನುಷ್ಠಾನ ಮಡೋಣ. ಶುಭ ಹಾರೈಕೆ ಮಾಡೋಣ. ಈ ನೌಕೆ ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯಬೇಕು. ಈ ಯೋಜನೆ ಪರಿಪೂರ್ಣ ಯಶಸ್ಸು ಕಾಣಬೇಕು.
ತನ್ಮೂಲಕ ದೇಶಕ್ಕೆ, ವಿಶ್ವಕ್ಕೆ ಶ್ರೇಯಸ್ಸು ಆಗಬೇಕು. ಆ ಆಕಾಶನೌಕೆ ಚಂದ್ರನಲ್ಲಿ ಇಳಿದು ಭಾರತದ ಕೀರ್ತಿಪತಾಕೆ ಚಂದ್ರನಲ್ಲಿ ಸ್ಥಾಪಿಸುವಂತೆ ಆಗುವ ಸುದಿನಕ್ಕಾಗಿ ಪ್ರತೀಕ್ಷೆ ಮಾಡೋಣ. ನಾವೆಲ್ಲ ಸೇರಿ ಇದಕ್ಕಾಗಿ ಪ್ರಾರ್ಥನೆ ಮಾಡೋಣ, ತಪಸ್ಸು ಮಾಡೋಣ ಎಂದು ಕೋರಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…