ಚಂದ್ರಯಾನ-3 ಪೂರ್ಣ ಯಶಸ್ಸಿನ ಪ್ರತೀಕ್ಷೆ: ರಾಘವೇಶ್ವರ ಸ್ವಾಮೀಜಿ

ಬಹುನಿರೀಕ್ಷಿತ ಚಂದ್ರಯಾನ-3 ಗಗನನೌಕೆ ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ. ಆಕಾಶದೆತ್ತರಕ್ಕೆ ಚಿಮ್ಮಿರುವುದು ಚಂದ್ರಯಾನ ನೌಕೆ ಮಾತ್ರವಲ್ಲ; ನಮ್ಮ ಹೃದಯ. ನಮ್ಮ ಹೃದಯ ಮಾತ್ರವಲ್ಲ, ಶತಕೋಟಿ ಭಾರತೀಯರ ಹೃದಯ ಇಂದು ಆಗಸಕ್ಕೆ ಯಶಸ್ವಿಯಾಗಿ ಹಾರಿದೆ ಎಂದು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀಮಹಾಸ್ವಾಮೀಜಿ ಬಣ್ಣಿಸಿದ್ದಾರೆ.

ಭಾರತದ ಇತಿಹಾಸದಲ್ಲಿ ಇದು ಅಪರೂಪದಲ್ಲಿ ಅಪರೂಪದ ದಿನ. ಉಡಾವಣೆ ಯಶಸ್ವಿಯಾದದ್ದು ಎಲ್ಲಿಲ್ಲದ ಸಂಭ್ರಮ ತಂದಿದೆ. ನಮಗೇ ಇಷ್ಟು ಖುಷಿಯಾಗಿರಬೇಕಾದರೆ ಆ ವಿಜ್ಞಾನಿಗಳಿಗೆ ಅದೆಷ್ಟು ಸಂಸತಸವಾಗಿರಬೇಡ ಎಂದು ಸ್ವಾಮೀಜಿ ಉದ್ಗರಿಸಿದ್ದಾರೆ.

“ಹಿಂದಿನ ಕಾಲದಲ್ಲಿ ಋಷಿಮುನಿಗಳು ತಪಸ್ಸು ಮಾಡುತ್ತಿದ್ದುದನ್ನು ನಾವು ಕೇಳಿದ್ದೇವೆ. ಇಸ್ರೋದಲ್ಲಿ ವಿಜ್ಞಾನಿಗಳು ಮಾಡುತ್ತಿರುವುದು ತಪಸ್ಸಿಗೆ ಕಡಿಮೆಯೇನೂ ಅಲ್ಲ. ಅವರ ಅಗಾಧವಾದ ಪರಿಶ್ರಮ ಫಲಕೊಟ್ಟು ಆಕಾಶನೌಕೆ ಯಶಸ್ವಿಯಾಗಿ ಉಡಾವಣೆಯಾಗಿರುವುದು ಶತಕೋಟಿ ಭಾರತೀಯರು ಹೆಮ್ಮೆಪಡುವಂಥ ವಿಚಾರ” ಎಂದು ಸಂದೇಶದಲ್ಲಿ ವಿವರಿಸಿದ್ದಾರೆ.

ಆಕಾಶದಲ್ಲಿ ಭಾರತದ ಕೀರ್ತಿಪತಾಕೆ ಹಾರುತ್ತಿದೆ ಎಂಬ ಭಾವನೆ ಬರುತ್ತಿದೆ. ನಾವು, ಧರ್ಮಪುರುಷರೆಲ್ಲ ಸೇರಿ ಅನುಷ್ಠಾನ ಮಡೋಣ. ಶುಭ ಹಾರೈಕೆ ಮಾಡೋಣ. ಈ ನೌಕೆ ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯಬೇಕು. ಈ ಯೋಜನೆ ಪರಿಪೂರ್ಣ ಯಶಸ್ಸು ಕಾಣಬೇಕು.

ತನ್ಮೂಲಕ ದೇಶಕ್ಕೆ, ವಿಶ್ವಕ್ಕೆ ಶ್ರೇಯಸ್ಸು ಆಗಬೇಕು. ಆ ಆಕಾಶನೌಕೆ ಚಂದ್ರನಲ್ಲಿ ಇಳಿದು ಭಾರತದ ಕೀರ್ತಿಪತಾಕೆ ಚಂದ್ರನಲ್ಲಿ ಸ್ಥಾಪಿಸುವಂತೆ ಆಗುವ ಸುದಿನಕ್ಕಾಗಿ ಪ್ರತೀಕ್ಷೆ ಮಾಡೋಣ. ನಾವೆಲ್ಲ ಸೇರಿ ಇದಕ್ಕಾಗಿ ಪ್ರಾರ್ಥನೆ ಮಾಡೋಣ, ತಪಸ್ಸು ಮಾಡೋಣ ಎಂದು ಕೋರಿದ್ದಾರೆ.

Ramesh Babu

Journalist

Recent Posts

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

5 minutes ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

12 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

12 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

15 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

17 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

19 hours ago