ಚಂದ್ರಯಾನ-3 ಪೂರ್ಣ ಯಶಸ್ಸಿನ ಪ್ರತೀಕ್ಷೆ: ರಾಘವೇಶ್ವರ ಸ್ವಾಮೀಜಿ

ಬಹುನಿರೀಕ್ಷಿತ ಚಂದ್ರಯಾನ-3 ಗಗನನೌಕೆ ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ. ಆಕಾಶದೆತ್ತರಕ್ಕೆ ಚಿಮ್ಮಿರುವುದು ಚಂದ್ರಯಾನ ನೌಕೆ ಮಾತ್ರವಲ್ಲ; ನಮ್ಮ ಹೃದಯ. ನಮ್ಮ ಹೃದಯ ಮಾತ್ರವಲ್ಲ, ಶತಕೋಟಿ ಭಾರತೀಯರ ಹೃದಯ ಇಂದು ಆಗಸಕ್ಕೆ ಯಶಸ್ವಿಯಾಗಿ ಹಾರಿದೆ ಎಂದು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀಮಹಾಸ್ವಾಮೀಜಿ ಬಣ್ಣಿಸಿದ್ದಾರೆ.

ಭಾರತದ ಇತಿಹಾಸದಲ್ಲಿ ಇದು ಅಪರೂಪದಲ್ಲಿ ಅಪರೂಪದ ದಿನ. ಉಡಾವಣೆ ಯಶಸ್ವಿಯಾದದ್ದು ಎಲ್ಲಿಲ್ಲದ ಸಂಭ್ರಮ ತಂದಿದೆ. ನಮಗೇ ಇಷ್ಟು ಖುಷಿಯಾಗಿರಬೇಕಾದರೆ ಆ ವಿಜ್ಞಾನಿಗಳಿಗೆ ಅದೆಷ್ಟು ಸಂಸತಸವಾಗಿರಬೇಡ ಎಂದು ಸ್ವಾಮೀಜಿ ಉದ್ಗರಿಸಿದ್ದಾರೆ.

“ಹಿಂದಿನ ಕಾಲದಲ್ಲಿ ಋಷಿಮುನಿಗಳು ತಪಸ್ಸು ಮಾಡುತ್ತಿದ್ದುದನ್ನು ನಾವು ಕೇಳಿದ್ದೇವೆ. ಇಸ್ರೋದಲ್ಲಿ ವಿಜ್ಞಾನಿಗಳು ಮಾಡುತ್ತಿರುವುದು ತಪಸ್ಸಿಗೆ ಕಡಿಮೆಯೇನೂ ಅಲ್ಲ. ಅವರ ಅಗಾಧವಾದ ಪರಿಶ್ರಮ ಫಲಕೊಟ್ಟು ಆಕಾಶನೌಕೆ ಯಶಸ್ವಿಯಾಗಿ ಉಡಾವಣೆಯಾಗಿರುವುದು ಶತಕೋಟಿ ಭಾರತೀಯರು ಹೆಮ್ಮೆಪಡುವಂಥ ವಿಚಾರ” ಎಂದು ಸಂದೇಶದಲ್ಲಿ ವಿವರಿಸಿದ್ದಾರೆ.

ಆಕಾಶದಲ್ಲಿ ಭಾರತದ ಕೀರ್ತಿಪತಾಕೆ ಹಾರುತ್ತಿದೆ ಎಂಬ ಭಾವನೆ ಬರುತ್ತಿದೆ. ನಾವು, ಧರ್ಮಪುರುಷರೆಲ್ಲ ಸೇರಿ ಅನುಷ್ಠಾನ ಮಡೋಣ. ಶುಭ ಹಾರೈಕೆ ಮಾಡೋಣ. ಈ ನೌಕೆ ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯಬೇಕು. ಈ ಯೋಜನೆ ಪರಿಪೂರ್ಣ ಯಶಸ್ಸು ಕಾಣಬೇಕು.

ತನ್ಮೂಲಕ ದೇಶಕ್ಕೆ, ವಿಶ್ವಕ್ಕೆ ಶ್ರೇಯಸ್ಸು ಆಗಬೇಕು. ಆ ಆಕಾಶನೌಕೆ ಚಂದ್ರನಲ್ಲಿ ಇಳಿದು ಭಾರತದ ಕೀರ್ತಿಪತಾಕೆ ಚಂದ್ರನಲ್ಲಿ ಸ್ಥಾಪಿಸುವಂತೆ ಆಗುವ ಸುದಿನಕ್ಕಾಗಿ ಪ್ರತೀಕ್ಷೆ ಮಾಡೋಣ. ನಾವೆಲ್ಲ ಸೇರಿ ಇದಕ್ಕಾಗಿ ಪ್ರಾರ್ಥನೆ ಮಾಡೋಣ, ತಪಸ್ಸು ಮಾಡೋಣ ಎಂದು ಕೋರಿದ್ದಾರೆ.

Ramesh Babu

Journalist

Recent Posts

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 hours ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

4 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

5 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

19 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

21 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

24 hours ago