ಚಂದ್ರಯಾನ-3 ಪೂರ್ಣ ಯಶಸ್ಸಿನ ಪ್ರತೀಕ್ಷೆ: ರಾಘವೇಶ್ವರ ಸ್ವಾಮೀಜಿ

ಬಹುನಿರೀಕ್ಷಿತ ಚಂದ್ರಯಾನ-3 ಗಗನನೌಕೆ ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ. ಆಕಾಶದೆತ್ತರಕ್ಕೆ ಚಿಮ್ಮಿರುವುದು ಚಂದ್ರಯಾನ ನೌಕೆ ಮಾತ್ರವಲ್ಲ; ನಮ್ಮ ಹೃದಯ. ನಮ್ಮ ಹೃದಯ ಮಾತ್ರವಲ್ಲ, ಶತಕೋಟಿ ಭಾರತೀಯರ ಹೃದಯ ಇಂದು ಆಗಸಕ್ಕೆ ಯಶಸ್ವಿಯಾಗಿ ಹಾರಿದೆ ಎಂದು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀಮಹಾಸ್ವಾಮೀಜಿ ಬಣ್ಣಿಸಿದ್ದಾರೆ.

ಭಾರತದ ಇತಿಹಾಸದಲ್ಲಿ ಇದು ಅಪರೂಪದಲ್ಲಿ ಅಪರೂಪದ ದಿನ. ಉಡಾವಣೆ ಯಶಸ್ವಿಯಾದದ್ದು ಎಲ್ಲಿಲ್ಲದ ಸಂಭ್ರಮ ತಂದಿದೆ. ನಮಗೇ ಇಷ್ಟು ಖುಷಿಯಾಗಿರಬೇಕಾದರೆ ಆ ವಿಜ್ಞಾನಿಗಳಿಗೆ ಅದೆಷ್ಟು ಸಂಸತಸವಾಗಿರಬೇಡ ಎಂದು ಸ್ವಾಮೀಜಿ ಉದ್ಗರಿಸಿದ್ದಾರೆ.

“ಹಿಂದಿನ ಕಾಲದಲ್ಲಿ ಋಷಿಮುನಿಗಳು ತಪಸ್ಸು ಮಾಡುತ್ತಿದ್ದುದನ್ನು ನಾವು ಕೇಳಿದ್ದೇವೆ. ಇಸ್ರೋದಲ್ಲಿ ವಿಜ್ಞಾನಿಗಳು ಮಾಡುತ್ತಿರುವುದು ತಪಸ್ಸಿಗೆ ಕಡಿಮೆಯೇನೂ ಅಲ್ಲ. ಅವರ ಅಗಾಧವಾದ ಪರಿಶ್ರಮ ಫಲಕೊಟ್ಟು ಆಕಾಶನೌಕೆ ಯಶಸ್ವಿಯಾಗಿ ಉಡಾವಣೆಯಾಗಿರುವುದು ಶತಕೋಟಿ ಭಾರತೀಯರು ಹೆಮ್ಮೆಪಡುವಂಥ ವಿಚಾರ” ಎಂದು ಸಂದೇಶದಲ್ಲಿ ವಿವರಿಸಿದ್ದಾರೆ.

ಆಕಾಶದಲ್ಲಿ ಭಾರತದ ಕೀರ್ತಿಪತಾಕೆ ಹಾರುತ್ತಿದೆ ಎಂಬ ಭಾವನೆ ಬರುತ್ತಿದೆ. ನಾವು, ಧರ್ಮಪುರುಷರೆಲ್ಲ ಸೇರಿ ಅನುಷ್ಠಾನ ಮಡೋಣ. ಶುಭ ಹಾರೈಕೆ ಮಾಡೋಣ. ಈ ನೌಕೆ ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯಬೇಕು. ಈ ಯೋಜನೆ ಪರಿಪೂರ್ಣ ಯಶಸ್ಸು ಕಾಣಬೇಕು.

ತನ್ಮೂಲಕ ದೇಶಕ್ಕೆ, ವಿಶ್ವಕ್ಕೆ ಶ್ರೇಯಸ್ಸು ಆಗಬೇಕು. ಆ ಆಕಾಶನೌಕೆ ಚಂದ್ರನಲ್ಲಿ ಇಳಿದು ಭಾರತದ ಕೀರ್ತಿಪತಾಕೆ ಚಂದ್ರನಲ್ಲಿ ಸ್ಥಾಪಿಸುವಂತೆ ಆಗುವ ಸುದಿನಕ್ಕಾಗಿ ಪ್ರತೀಕ್ಷೆ ಮಾಡೋಣ. ನಾವೆಲ್ಲ ಸೇರಿ ಇದಕ್ಕಾಗಿ ಪ್ರಾರ್ಥನೆ ಮಾಡೋಣ, ತಪಸ್ಸು ಮಾಡೋಣ ಎಂದು ಕೋರಿದ್ದಾರೆ.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

6 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

7 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

19 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

22 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago